23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವನಮಹೋತ್ಸವ

ವೇಣೂರು: ನಮ್ಮ ಹಿರಿಯರ ಪರಿಸರ ಕಾಳಜಿ ನಮಗಿಂದು ಉಸಿರಾಗಿ ದಕ್ಕಿದೆ. ಇದನ್ನು ವರ್ಧಿಸುವುದಕ್ಕಾಗಿ ಯುವ ಶಿಕ್ಷಣ ವ್ಯವಸ್ಥೆಯಲ್ಲಿ ಪರಿಸರ ಕಾಳಜಿಗೆ ಪ್ರಮುಖ ಆದ್ಯತೆ ನೀಡಬೇಕು ಎಂದು ಎಕ್ಸೆಲ್ ಕ್ಯಾಂಪಸ್ ವ್ಯವಸ್ಥಾಪಕ ಶಾಂತಿ ರಾಜ್ ಜೈನ್ ಹೇಳಿದರು.

ಅವರು, ಜು. 5ರಂದು ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು ಇಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕಿ ಸುಜಾತಾ ಬಿ, ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಹುಟ್ಟು ಹಬ್ಬದ ಸಮಯದಲ್ಲಿ ಒಂದು ಗಿಡ ನೆಟ್ಟು ಪರಿಸರ ಕಾಳಜಿಯನ್ನು ಅರ್ಥ ಪೂರ್ಣವಾಗಿಸಬೇಕೆಂದರು. ಪ್ರಾಸ್ತಾವಿಕ ನುಡಿದ
ಶಿಕ್ಷಕಿ ಕಾವ್ಯಶ್ರೀ 1950ರಲ್ಲಿ ಆಚರಣೆಗೆ ಬಂದ ವನಮಹೋತ್ಸವ, ಜಾಗೃತಿ ಅಭಿಯಾನವಾಗಿ ರೂಪುಗೊಂಡಿದೆ ಎಂದರು.

ಕಾರ್ಯಕ್ರಮದಲ್ಲಿ ಎಕ್ಸೆಲ್ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕಿ ಶ್ರೀಮತಿ ಸಹನಾ ಜೈನ್, ಸದಸ್ಯರಾದ ಶ್ರೀಮತಿ ಶ್ರುತಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಾದ ಪ್ರಣಮ್ಯಾ, ಸಾನ್ವಿ, ಅನ್ವಿತಾ, ಹರ್ಷಿಕಾ ಪ್ರಾರ್ಥಿಸಿದ ಸಭೆಗೆ ಶಿಕ್ಷಕರಾದ ಅರುಣ್ ಕುಮಾರ್ ನಿರೂಪಿಸಿ , ದಾಮೋದರ್ ಸ್ವಾಗತಿಸಿ, ಶ್ರೀಮತಿ ಅಪರ್ಣಾ ಧನ್ಯವಾದವಿತ್ತರು.

ಶ್ವೇತಾ ಜೈನ್, ಶಾಲಿನಿ, ವಿಂದ್ಯಾ, ಅಕ್ಷತಾ , ಪ್ರಸಾದ್, ಮಮತಾ ಸಹಕರಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

Related posts

ಅರಸಿನಮಕ್ಕಿ ಬಂಟರ ಸಂಘದ ಕಛೇರಿ ಆವರಣದ ಗೇಟ್ ಉದ್ಘಾಟನೆ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

Suddi Udaya

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

Suddi Udaya

ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿ ಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya

ಸುಲ್ಕೇರಿಮೊಗ್ರು: ಬಾಣಂತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!