September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿಯ ಯುವಕ ನೇಣುಬಿಗಿದು ಆತ್ಮಹತ್ಯೆ

ಸುಲ್ಕೇರಿ: ಗಾರೆ ಕೆಲಸ ಮಾಡಿಕೊಂಡಿದ್ದ ಯುವಕನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಲ್ಕೇರಿಯಲ್ಲಿ ಕಳೆದ ರಾತ್ರಿ ಜು. 4ರಂದು ನಡೆದಿದೆ.

ಮೃತ ಯುವಕನನ್ನು ಸುಲ್ಕೇರಿ ಗ್ರಾಮದ ಮುಡಿಪಿರೆ ನಿವಾಸಿ ಕಿಶೋರ್ (25ವ) ಎಂದು ಗುರುತಿಸಲಾಗಿದೆ.

ಕಿಶೋರು ಅವರು ಗಾರೆ ಕೆಲಸ, ಮದ್ದು ಸಿಂಪಡಿಸುವ ಕೆಲಸ ಮಾಡಿಕೊಂಡಿದ್ದರೆನ್ನಲಾಗಿದೆ. ಕಳೆದ ಒಂದು ವಾರದಿಂದ ಮಂಕಾಗಿದ್ದು,ಯಾರಲ್ಲಿಯೂ ಹೆಚ್ಚು ಬೆರೆಯುತ್ತಿರಲಿಲ್ಲ. ನಿನ್ನೆ ಮಧ್ಯಾಹ್ನದಿಂದ ಅವರು ನಾಪತ್ತೆಯಾಗಿದ್ದು,ಸಂಜೆಯವರೆಗೆ ಮನೆಗೆ ಬಾರದೆ ಇದ್ದಾಗ ಸ್ಥಳಿಯರು ಸೇರಿ ಹುಡುಕಲು ಪ್ರಾರಂಭಿಸಿದರು.ರಾತ್ರಿ ಸುಮಾರು 11 ಗಂಟೆಗೆ ನೇಣು ಬಿಗಿದುಕೊಂಡ ರೀತಿಯಲ್ಲಿ ಕಿಶೋರು ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಥಳಿಯರು ತಿಳಿಸಿದ್ದಾರೆ. ಸ್ಥಳಕ್ಕೆ ವೇಣೂರು ಪೋಲಿಸರು ಆಗಮಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

ಇವರು ಸಹೋದರ ಕೀರ್ತನ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ: ಶ್ರೀ ಧ. ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಜನ್ಮದಿನಾಚರಣೆ

Suddi Udaya

ಮುಂಡಾಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

Suddi Udaya

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

Suddi Udaya

ಕಳೆಂಜ: ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಧನಂಜಯ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya
error: Content is protected !!