26.7 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಪ.ಪೂ. ಕಾಲೇಜು: ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು. ಕಾರ್ಯ ಚಟುವಟಿಕೆಗಳನ್ನು ಉಜಿರೆ ಎಸ್.ಡಿ.ಎಂ. ಕಾಲೇಜು (ಸ್ವಾಯತ್ತ) ಇಲ್ಲಿನ ಅರ್ಥ ಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿಭಾಗದ ಮುಖ್ಯಸ್ಥ ಡಾ. ಗಣರಾಜ್ ಕೆ. ರವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು “ಸೇವೆಯೇ ಧ್ಯೇಯವಾಗಿರುವ ರಾಷ್ಟ್ರೀಯ ಸೇವಾ ಯೋಜನೆಯು ದೇಶದ ಅಭಿವೃದ್ಧಿಗೆ ಬಹಳ ಕೊಡುಗೆ ನೀದಿದೆ. ಅಲ್ಲದೆ ಸ್ವಯಂ ಸೇವಕರಿಗೆ ಸಮಾಜದ ಜೊತೆ ಒಡನಾಟವನ್ನು ಬೆಳೆಸಿ ಅವರ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿ. ಆದುದರಿಂದ ತಮ್ಮನ್ನು ಅದರಲ್ಲಿ ತೊಡಗಿಸಿಕೊಂಡು ಉತ್ತಮ ವ್ಯಕ್ತಿತ್ವ ಮೂಡಿಸಿಕೊಳ್ಳಬೇಕು” ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಚಾರ್ಯ ಪ್ರಮೋದ್ ಕುಮಾರ್ ರವರು “ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯು ಅತ್ಯುತ್ತಮ ಕಾರ್ಯಕ್ರಮಗಳ ಮೂಲಕ ಯಶಸ್ವಿಯಾಗಿ ಮುನ್ನಡೆದುಕೊಂಡು ಬಂದಿದೆ. ಇಲ್ಲಿನ ಸ್ವಯಂ ಸೇವಕರು ರಾಜ್ಯ,ರಾಷ್ಟ್ರ ಮಟ್ಟದ ಶಿಬಿರದಲ್ಲಿ ಭಾಗವಹಿಸಿದ್ದಾರೆ.

ಮುಂದೆಯೂ ಇಂತಹ ಸಾಧನೆಗಳು ಮರುಕಳಿಸಲಿ “ಎಂದು ಹೇಳಿದರು.ವೇದಿಕೆಯಲ್ಲಿ ಉಪಪ್ರಾಂಶುಪಾಲ ಡಾ. ರಾಜೇಶ್ ಬಿ. ನಿಕಟ ಪೂರ್ವ ಯೋಜನಾಧಿಕಾರಿಗಳಾದ ಡಾ. ಪ್ರಸನ್ನ ಕುಮಾರ್ ಐತಾಳ್, ಯೋಜನಾಧಿಕಾರಿಗಳಾದ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶ್ರೀಮತಿ ಶೋಭಾ ಪಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಲಹಾ ಸಮಿತಿ ಸದಸ್ಯರಾದ ದಿವ್ಯ ಕುಮಾರಿ ಹಾಗೂ ನಾಗರಾಜ್ ಭಂಡಾರಿರವರು ಉಪಸ್ಥಿತರಿದ್ದರು.ಸ್ವಯಂ ಸೇವಕಿಯರಾದ ಧನ್ಯ ನಿರೂಪಿಸಿ, ಮೇಘ ಸ್ವಾಗತಿಸಿ, ಗ್ರಂಥ ಧನ್ಯವಾದವಿತ್ತರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿ ಕಾಲಾವಕಾಶ ವಿಸ್ತರಣೆ

Suddi Udaya

ಎಸ್.ಡಿ.ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ: ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಬ್ಬರಿಗೆ ಸನ್ಮಾನ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ , ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ಆಯ್ಕೆ

Suddi Udaya
error: Content is protected !!