ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

ಕೊಕ್ರಾಡಿ: ಅತೀವ ಮಳೆಯಿಂದ ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಸಾರ್ವಜನಿಕರು ಓಡಾಟ ನಡೆಸಲು ಕಷ್ಟವಾಗಿದೆ.

ಸೇತುವೆ ನಿರ್ಮಾಣದ ವಿಚಾರಕ್ಕೆ ಸರಕಾರಕ್ಕೆ ಅನೇಕ ಭಾರಿ ಮನವಿ ಸಲ್ಲಿಸಿದರು ಇನ್ನೂ ಭೇಡಿಕೆ ಈಡೇರಿಲ್ಲ.ಇದರಿಂದ ಸಾರ್ವಜನಿಕರಿಗೆ,ಉದ್ಯೋಗಸ್ಥರಿಗೆ,ವಿದ್ಯಾರ್ಥಿಗಳಿಗೆ ಸಂಚಾರಕ್ಕೆ ತುಂಬಾ ಸಮಸ್ಯೆಯಾಗಿದೆ.

ಇದೀಗ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ,ಅಂಡಿಂಜೆ ಗ್ರಾಮ‌ ಪಂಚಾಯತ್ ಸದಸ್ಯ ಜಗದೀಶ್ ಹೆಗ್ಡೆ ನೇತೃತ್ವದಲ್ಲಿ ಹಾಗೂ ಭಾರತೀಯ ಜನತಾ ಪಾರ್ಟಿಯ ಗ್ರಾಮ ಸಮಿತಿ ಹಾಗೂ ಊರಿನವರ ಸಹಕಾರದಿಂದ ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆಗೆ ಅಡಿಕೆ ಮರದ ತಾತ್ಕಾಲಿಕ ಸೇತುವೆಯನ್ನು ನಿರ್ಮಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಈ ಸಂದರ್ಭದಲ್ಲಿ ಬಿಜೆಪಿ ಶಕ್ತಿಕೇಂದ್ರದ ಅದ್ಯಕ್ಷ ಜಗದೀಶ್ ಹೆಗ್ಡೆ, ಕೊಕ್ರಾಡಿ ಬೂತ್ ಸಮಿತಿ ಅಧ್ಯಕ್ಷ ನೀಲಕಂಠ ಪ್ರಸಾದ್,ಕಾರ್ಯದರ್ಶಿ ಲೋಹಿತ್,ಶಾರದಾಂಭ ಯುವಕ ಮಂಡಲದ ಸದಸ್ಯರು,ಸ್ಥಳಿಯರಾದ ಚಂದ್ರಶೇಖರ ಶೆಟ್ಟಿಗಾರ್ ,ಕರುಣಾಕರ,ಸುಜಿತ್,ಸಂಜೀವ, ಹರೀಶ್,ಬೋಜ ಶೆಟ್ಟಿ ಹಾಗೂ ಇತರರು ಇದ್ದರು. ಈ ಸಂದರ್ಭ ನಾರಾವಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಾಲತಾ ಭೇಟಿ ನೀಡಿದರು.

Related posts

ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹುಣ್ಸೆಕಟ್ಟೆ ಭಜನಾ ಮಂಡಳಿಯ ಸದಸ್ಯರು

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜಯದಶಮಿಯ ವಿಶೇಷ ಪೂಜೆ ಹಾಗೂ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ

Suddi Udaya

ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಸಾವು

Suddi Udaya

ಮುಂಡಾಜೆ ಸರಸ್ವತಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

Suddi Udaya
error: Content is protected !!