25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಶಾಂತಿಶ್ರೀ ‘ ಜೈನ ಮಹಿಳಾ ಸಮಾಜದ ವತಿಯಿಂದ, ‘ ಶೈಕ್ಷಣಿಕ ಕಾರ್ಯಕ್ರಮ ‘

ಬೆಳ್ತಂಗಡಿ : ಶಾಂತಿಶ್ರೀ ‘ ಜೈನ ಮಹಿಳಾ ಸಮಾಜದ ವತಿಯಿಂದ, ‘ ಶೈಕ್ಷಣಿಕ ಕಾರ್ಯಕ್ರಮ ‘ ವನ್ನು ಬೆಳ್ತಂಗಡಿ ಶ್ರೀ. ಧ. ಮಂ. ಕಲಾ ಭವನದಲ್ಲಿ ಜೂ. 29 ರಂದು ನಡೆಯಿತು.ಮುಖ್ಯ ಅತಿಥಿಗಳಾಗಿ ಶ್ರೀ. ಧ. ಮಂ. ಕಾಲೇಜು, ಉಜಿರೆ, ಇಲ್ಲಿಯ ಉಪನ್ಯಾಸಕರು, ಜೈನ್ ಮಿಲನ್, ಬೆಳ್ತಂಗಡಿ ಇದರ ಅಧ್ಯಕ್ಷರೂ ಆಗಿರುವ ಡಾ| ನವೀನ್ ಕುಮಾರ್ ಜೈನ್ ರವರು ಭಾಗವಹಿಸಿ, ವಿಧ್ಯಾರ್ಥಿಗಳ ವಿದ್ಯಾರ್ಜನೆಗೆ ಪೂರಕವಾದಂತಹ ಸ್ಪೂರ್ತಿದಾಯಕ ಮಾತುಗಳನ್ನು ಹೇಳುತ್ತಾ, ಯಶಸ್ಸನ್ನು ಬಯಸುವುದಾದರೆ ಕಠಿಣ ಪರಿಶ್ರಮ ಅಗತ್ಯ ಎಂದು ಸಲಹೆ ನೀಡಿದರು. ಶೈಕ್ಷಣಿಕ ಕಾರ್ಯಕ್ರಮದಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜನೆ ಮಾಡಿರುವ, ‘ ಶಾಂತಿಶ್ರೀ ‘ ಜೈನ ಮಹಿಳಾ ಸಮಾಜದವರ ಈ ಹಿಂದಿನ ಎಲ್ಲಾ ಕಾರ್ಯ ಚಟುವಟಿಕೆಗಳು, ಯಶಸ್ವಿ ಕಾರ್ಯಕ್ರಮವಾಗಿದೆ ಎಂದು ಶ್ಲಾಘಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಶ್ರೀಮತಿ ಪ್ರೊ| ತ್ರಿಶಲಾ ಜೈನ್ ಕೆ ಎಸ್ ರವರು, ವಿಧ್ಯಾರ್ಥಿ ಜೀವನದಂತಹ ಸುವರ್ಣಾವಕಾಶಗಳು ಮತ್ತೊಮ್ಮೆ ಸಿಗುವುದಿಲ್ಲ. ಸಾಧನೆಯೊಂದಿದ್ದರೆ ಗುರಿ ತಲುಪಲು ಸಾಧ್ಯ ಎಂದು ಹೇಳುತ್ತಾ, ಸಮಾಜದ ಎಲ್ಲಾ ಸದಸ್ಯೆಯರ ಸಹಕಾರವನ್ನು ಅಭಿನಂದಿಸಿದರು.


ನಮ್ಮ ಸಮಾಜದ ಸದಸ್ಯೆಯರ 10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಉತ್ತೀರ್ಣರಾದ ಎಂಟು ಮಂದಿ ಮಕ್ಕಳಿಗೆ ವಿಧ್ಯಾರ್ಥಿ ಪ್ರೋತ್ಸಾಹ ಧನವನ್ನು ಸಂಘದ ದಾನಿಗಳ ಸಹಕಾರದಿಂದ ವಿತರಿಸಲಾಯಿತು. ಕಾರ್ಯದರ್ಶಿಯವರಾದ ಶ್ರೀಮತಿ ರಾಜಶ್ರೀ ಎಸ್ ಹೆಗ್ಡೆ ಯವರು ಸ್ವಾಗತದೊಂದಿಗೆ ಪ್ರಸ್ತಾವಿಕ ನುಡಿಗಳನ್ನಾಡಿದರು. ಶರ್ಮತಿ ಮತ್ತು ಬಳಗದವರು ಪಾರ್ಥನೆ ಹಾಡಿದರು, ಕೋಶಾಧಿಕಾರಿ ಶ್ರೀಮತಿ ಅನುಪ ಕುಮಾರಿ ಯವರು ಕಾರ್ಯಕ್ರಮ ಸಂಘಟಿಸಿದರು. ಶ್ರೀಮತಿ ತ್ರಿಶಲಾ ಅಥಿಕಾರಿ ಮತ್ತು ಶ್ರೀಮತಿ ದವಳ ರವರು ಕಾರ್ಯಕ್ರಮ ನಿರ್ವಹಿಸಿ, ಶ್ರೀಮತಿ ಉಷಾ ರವರು ಧನ್ಯವಾದ ನೀಡಿದರು.

Related posts

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ: ದೂರುದಾರ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ ಎಸ್ಐಟಿ

Suddi Udaya
error: Content is protected !!