37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

ಕೊಕ್ರಾಡಿ: ಅತೀವ ಮಳೆಯಿಂದ ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಸಾರ್ವಜನಿಕರು ಓಡಾಟ ನಡೆಸಲು ಕಷ್ಟವಾಗಿದೆ.

ಸೇತುವೆ ನಿರ್ಮಾಣದ ವಿಚಾರಕ್ಕೆ ಸರಕಾರಕ್ಕೆ ಅನೇಕ ಭಾರಿ ಮನವಿ ಸಲ್ಲಿಸಿದರು ಇನ್ನೂ ಭೇಡಿಕೆ ಈಡೇರಿಲ್ಲ.ಇದರಿಂದ ಸಾರ್ವಜನಿಕರಿಗೆ,ಉದ್ಯೋಗಸ್ಥರಿಗೆ,ವಿದ್ಯಾರ್ಥಿಗಳಿಗೆ ಸಂಚಾರಕ್ಕೆ ತುಂಬಾ ಸಮಸ್ಯೆಯಾಗಿದೆ.

ಇದೀಗ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ,ಅಂಡಿಂಜೆ ಗ್ರಾಮ‌ ಪಂಚಾಯತ್ ಸದಸ್ಯ ಜಗದೀಶ್ ಹೆಗ್ಡೆ ನೇತೃತ್ವದಲ್ಲಿ ಹಾಗೂ ಭಾರತೀಯ ಜನತಾ ಪಾರ್ಟಿಯ ಗ್ರಾಮ ಸಮಿತಿ ಹಾಗೂ ಊರಿನವರ ಸಹಕಾರದಿಂದ ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆಗೆ ಅಡಿಕೆ ಮರದ ತಾತ್ಕಾಲಿಕ ಸೇತುವೆಯನ್ನು ನಿರ್ಮಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಈ ಸಂದರ್ಭದಲ್ಲಿ ಬಿಜೆಪಿ ಶಕ್ತಿಕೇಂದ್ರದ ಅದ್ಯಕ್ಷ ಜಗದೀಶ್ ಹೆಗ್ಡೆ, ಕೊಕ್ರಾಡಿ ಬೂತ್ ಸಮಿತಿ ಅಧ್ಯಕ್ಷ ನೀಲಕಂಠ ಪ್ರಸಾದ್,ಕಾರ್ಯದರ್ಶಿ ಲೋಹಿತ್,ಶಾರದಾಂಭ ಯುವಕ ಮಂಡಲದ ಸದಸ್ಯರು,ಸ್ಥಳಿಯರಾದ ಚಂದ್ರಶೇಖರ ಶೆಟ್ಟಿಗಾರ್ ,ಕರುಣಾಕರ,ಸುಜಿತ್,ಸಂಜೀವ, ಹರೀಶ್,ಬೋಜ ಶೆಟ್ಟಿ ಹಾಗೂ ಇತರರು ಇದ್ದರು. ಈ ಸಂದರ್ಭ ನಾರಾವಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಾಲತಾ ಭೇಟಿ ನೀಡಿದರು.

Related posts

ಪುದುವೆಟ್ಟು: ಮುಳಿಮಜಲು ನಿವಾಸಿ ಲಕ್ಷ್ಮೀನಾರಾಯಣ ರಾವ್ ನಿಧನ

Suddi Udaya

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ಡಿ.6: ಲಾಯಿಲ ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಪ್ರಶ್ನಾಚಿಂತನೆ

Suddi Udaya

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಕಾಮರ್ಸ್ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಭಾರಿ ರಿಯಾಯಿತಿ

Suddi Udaya
error: Content is protected !!