July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

ಕೊಕ್ರಾಡಿ: ಅತೀವ ಮಳೆಯಿಂದ ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಸಾರ್ವಜನಿಕರು ಓಡಾಟ ನಡೆಸಲು ಕಷ್ಟವಾಗಿದೆ.

ಸೇತುವೆ ನಿರ್ಮಾಣದ ವಿಚಾರಕ್ಕೆ ಸರಕಾರಕ್ಕೆ ಅನೇಕ ಭಾರಿ ಮನವಿ ಸಲ್ಲಿಸಿದರು ಇನ್ನೂ ಭೇಡಿಕೆ ಈಡೇರಿಲ್ಲ.ಇದರಿಂದ ಸಾರ್ವಜನಿಕರಿಗೆ,ಉದ್ಯೋಗಸ್ಥರಿಗೆ,ವಿದ್ಯಾರ್ಥಿಗಳಿಗೆ ಸಂಚಾರಕ್ಕೆ ತುಂಬಾ ಸಮಸ್ಯೆಯಾಗಿದೆ.

ಇದೀಗ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ,ಅಂಡಿಂಜೆ ಗ್ರಾಮ‌ ಪಂಚಾಯತ್ ಸದಸ್ಯ ಜಗದೀಶ್ ಹೆಗ್ಡೆ ನೇತೃತ್ವದಲ್ಲಿ ಹಾಗೂ ಭಾರತೀಯ ಜನತಾ ಪಾರ್ಟಿಯ ಗ್ರಾಮ ಸಮಿತಿ ಹಾಗೂ ಊರಿನವರ ಸಹಕಾರದಿಂದ ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆಗೆ ಅಡಿಕೆ ಮರದ ತಾತ್ಕಾಲಿಕ ಸೇತುವೆಯನ್ನು ನಿರ್ಮಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಈ ಸಂದರ್ಭದಲ್ಲಿ ಬಿಜೆಪಿ ಶಕ್ತಿಕೇಂದ್ರದ ಅದ್ಯಕ್ಷ ಜಗದೀಶ್ ಹೆಗ್ಡೆ, ಕೊಕ್ರಾಡಿ ಬೂತ್ ಸಮಿತಿ ಅಧ್ಯಕ್ಷ ನೀಲಕಂಠ ಪ್ರಸಾದ್,ಕಾರ್ಯದರ್ಶಿ ಲೋಹಿತ್,ಶಾರದಾಂಭ ಯುವಕ ಮಂಡಲದ ಸದಸ್ಯರು,ಸ್ಥಳಿಯರಾದ ಚಂದ್ರಶೇಖರ ಶೆಟ್ಟಿಗಾರ್ ,ಕರುಣಾಕರ,ಸುಜಿತ್,ಸಂಜೀವ, ಹರೀಶ್,ಬೋಜ ಶೆಟ್ಟಿ ಹಾಗೂ ಇತರರು ಇದ್ದರು. ಈ ಸಂದರ್ಭ ನಾರಾವಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಾಲತಾ ಭೇಟಿ ನೀಡಿದರು.

Related posts

ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಶಾಸಕ ಹರೀಶ್ ಪೂಂಜರಿಂದ ಭರವಸೆ

Suddi Udaya

ಧರ್ಮಸ್ಥಳ: ಟಾಟಾ ಸುಮೋ ಹಾಗೂ ಸ್ಕೂಟಿ ನಡುವೆ ರಸ್ತೆ ಅಪಘಾತ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್‍ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್: ಗ್ರಾಹಕರಿಗೆ ರೂ.10 ಸಾವಿರ ತನಕ ಉಳಿತಾಯ ಮಾಡುವ ಸುವರ್ಣ ಅವಕಾಶ

Suddi Udaya

ಪಡ್ಡಂದಡ್ಕ: ಕುರುಂಬಡ್ಕ ನಿವಾಸಿ ಕಬ್ಬು ನಿಧನ

Suddi Udaya

ಲಾಯಿಲ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಶ್ರದ್ದೇಶ್ ಗಾಣಿಗ, ಕಾರ್ಯದರ್ಶಿಯಾಗಿ ಅಜಯ್

Suddi Udaya
error: Content is protected !!