25.5 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಪಾಲೇದು ಶಾಲೆಯಲ್ಲಿ ಪರಿಸರ ದಿನಾಚರಣೆ

ತಣ್ಣೀರುಪಂತ: ಪಾಲೇದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ ಜು.6 ರಂದು ನಡೆಯಿತು.

ಮಡಂತ್ಯಾರು ಮತ್ತು ಮಚ್ಚಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ, ಜ್ಞಾನ ವಿಕಾಸ ಪಾಲೇದು ಹಾಗೂ ಕುದ್ರಡ್ಕ ಒಕ್ಕೂಟದ ಸಹಭಾಗಿತ್ವದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ಪಾಲೇದು ಶಾಲೆಯಲ್ಲಿ ನಡೆಯಿತು.

ರಾಷ್ಟ್ರೀಯವಾದಿ, ಭಾರತೀಯ ಜನಸಂಘದ ಸಂಸ್ಥಾಪಕ ಡಾ.ಶ್ಯಾಮಪ್ರಸಾದ್ ಮುಖರ್ಜಿ ಜನ್ಮದಿನ ಸ್ಮರಣೆ ಅಂಗವಾಗಿ ವಿವಿಧ ಬಗೆಯ ಹಣ್ಣಿನ ಕೈ ತೋಟ ರಚನೆ ಹಾಗೂ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಲಾಯಿತು. ಕುದ್ರಡ್ಕ ಒಕ್ಕೂಟದ ಅಧ್ಯಕ್ಷ ವಿಜಯ ಮಡಕ್ಕಿಲ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ, ಗ್ರಾ.ಪಂ. ಸದಸ್ಯ ಅನಿಲ್ ಪಾಲೇದು, ಪುತ್ತಿಲ ಗ್ರಾ.ಪಂ.ಸದಸ್ಯ ವಸಂತ ಬೋಲ್ಡೆಲು, ವಲಯ ಮೇಲ್ವಿಚಾರಕ ಕೇಶವ್, ಕೃಷಿ ಅಧಿಕಾರಿ ಕೃಷ್ಣ, ಸೇವಾ ಪ್ರತಿನಿಧಿಗಳಾದ ನಂದಿನಿ, ಪರಮೇಶ್ವರ್ ಹಾಗೂ ಹರಿಣಾಕ್ಷಿ, ಪಾಲೇದು ಜ್ಞಾನ ವಿಕಾಸ ಅಧ್ಯಕ್ಷೆ ಜಯಂತಿ ಪಾಲೇದು, ಕುದ್ರಡ್ಕ ಒಕ್ಕೂಟದ ಕಾರ್ಯದರ್ಶಿ ಗೀತಾ ಉಪಸ್ಥಿತರಿದ್ದರು.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಬೆಳ್ತಂಗಡಿ ಸ.ಪ್ರಥಮ ದರ್ಜೆ ಕಾಲೇಜಿನಲ್ಲಿ ಮ್ಯೂಚುವಲ್ ಫಂಡ್ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಬದನಾಜೆ ಶಾಲಾ ಅಮೃತಮಹೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಹೊಸ ತಿರುವು: ಪ್ರಕರಣದ ತನಿಖೆಯ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಸೂಚನೆ

Suddi Udaya

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

Suddi Udaya
error: Content is protected !!