22.6 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿಸಂಘ-ಸಂಸ್ಥೆಗಳು

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ ಪ್ರಾಯೋಜಿತ ಕೌಶಲ್ಯ ಅಭಿವೃದ್ಧಿ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

ತಣ್ಣೀರುಪಂತ: ಮಂಗಳೂರು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಪ್ರಾಯೋಜಕತ್ವದಲ್ಲಿ, ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್ ಇವರ ನೇತೃತ್ವದಲ್ಲಿ, ಒಂದು ತಿಂಗಳ ಬ್ರೈಡಲ್ ಮೇಕ್ಅಪ್ ಹಾಗೂ ಟೈಲರಿಂಗ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ತಣ್ಣೀರುಪಂತ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣ ಕಲ್ಲೇರಿಯಲ್ಲಿ ನಡೆಯಿತು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹನಾಧಿಕಾರಿ ಜ್ಯೋತಿ ರಾಜ್ ತರಬೇತಿ ಉದ್ಘಾಟಿಸಿ ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರಿಗೆ ಶುಭ ಕೋರಿದರು. ಇತ್ತೀಚಿನ ದಿನಗಳಲ್ಲಿ ಬ್ರೈಡಲ್ ಮೇಕ್ಅಪ್ ಹಾಗೂ ಟೈಲರಿಂಗ್ ತರಬೇತಿಗೆ ಹೆಚ್ಚಿನ ಬೇಡಿಕೆಯಿದ್ದು, ತರಬೇತಿಯನ್ನು ಉತ್ತಮ ಮಟ್ಟದಲ್ಲಿ ಪಡೆದು ಮಹಿಳೆಯರು ಮುಂದೆ ಹೆಚ್ಚಿನ ಕೌಶಲ್ಯ ಪಡೆಯಲು ಪ್ರೇರೇಪಿಸಿದರು ಹಾಗೂ ತರಬೇತಿ ನಂತರ ಬ್ಯಾಂಕ್ ನಿಂದ ಸಿಗುವ ಸಾಲ ಸೌಲಭ್ಯ ಪಡೆದು ಸ್ವ ಉದ್ಯೋಗ ಪ್ರಾರಂಭಿಸಲು ಸಲಹೆ ನೀಡಿದರು.

ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ತರಬೇತಿಯ ನಿಯಮಗಳ ಬಗ್ಗೆ ವಿವರಿಸಿ, ತರಬೇತಿಯಲ್ಲಿ ಪಡೆದ ಕೌಶಲ್ಯವನ್ನು ಸ್ವ ಉದ್ಯೋಗ ಮಾಡುವಲ್ಲಿ ಪರಿವರ್ತನೆ ಮಾಡಲು ಕರೆ ನೀಡಿದರು. ವೇದಿಕೆಯಲ್ಲಿ ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷೆ ಹೇಮಾವತಿ, ತಣ್ಣೀರುಪಂತ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಜಯರಾಜ್ ಜೈನ್, ಬ್ರೈಡಲ್ ಮೇಕ್ಅಪ್ ತರಬೇತುದಾರೆ ಸಂಧ್ಯಾ, ಟೈಲರಿಂಗ್ ತರಬೇತುದಾರೆ ಮೀನಾಕ್ಷಿ ಉಪಸ್ಥಿತರಿದ್ದರು.

ಸ್ನೇಹ ಕಾರ್ಯಕ್ರಮ ನಿರೂಪಿಸಿ, ಸುಮ ಸ್ವಾಗತಿಸಿ, ಶಿಲ್ಪಾ ಧನ್ಯವಾದ ಗೈದರು. ಕಲ್ಲೇರಿ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 30 ಮಹಿಳೆಯರು ಈ ತಿಂಗಳ ತರಬೇತಿ ಪಡೆಯಲಿದ್ದಾರೆ.

Related posts

ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ: ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರು ಆರೋಪಿಗಳ ಬಂಧನ

Suddi Udaya

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಕಾಶಿಪಟ್ಣ: ರಿಕ್ಷಾ ಪಲ್ಟಿ, ಶೀಘ್ರವಾಗಿ ರಸ್ತೆ ದುರಸ್ತಿಗೆ ಪಂಚಾಯತ್ ಗೆ ಮನವಿ

Suddi Udaya

ಡಿ. 8: ನಮ್ಮೂರ ಜಾತ್ರೆ ಕುಂಭಶ್ರೀ ವೈಭವ ಹಾಗೂ ಮಾತ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya
error: Content is protected !!