September 6, 2026
ಬೆಳ್ತಂಗಡಿರಾಜಕೀಯ

ಅಸಂಘಟಿತ ಕಾರ್ಮಿಕ ನಗರ ಸಮಿತಿ & ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ & ಕಾರ್ಯಕರ್ತರ ಸಮಲೋಚನೆ ಸಭೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಅಸಂಗಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಹಾಗೂ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಇದರ ಜಂಟಿ ಆಶ್ರಯದಲ್ಲಿ ಜು.5 ರಂದು ಬೆಳ್ತಂಗಡಿ ನಗರ ಕಾಂಗ್ರೆಸ್ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕ ನಗರ ಸಮಿತಿ ಹಾಗೂ ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಮಲೋಚನೆ ಸಭೆ ಜರಗಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಸಂಘಟನೆಯ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಅಧ್ಯಕ್ಷತೆಯನ್ನು ಜಿಲ್ಲಾ ಸಂಘಟಿತ ಕಾರ್ಮಿಕ ಕಾಂಗ್ರೆಸಿನ ಅಧ್ಯಕ್ಷ ಅಬ್ಬಾಸ್ ಆಲಿ ವಹಿಸಿ ಮಾತನಾಡಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿಯನ್ನು ಬಲಿಷ್ಠಗೊಳಿಸಲು ಹಾಗೂ ಮುಂದಿನ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಗ್ರಾಮ ಪಂಚಾಯತ್ ಚುನಾವಣೆಯನ್ನು ಗೆಲ್ಲಿಸಲು ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಶ್ರಮಿಸಬೇಕು. ಸರಕಾರದಿಂದ ಸಿಗುವ ಪ್ರತಿಯೊಂದು ಸೌಲಭ್ಯವು ಕಾರ್ಮಿಕರಿಗೆ ತಲುಪಿಸುವ ಕೆಲಸವನ್ನು ಸಂಘಟಕರು ಮಾಡಬೇಕು ಎಂದರು.

ಅಸಂಗಡಿತ ಕಾರ್ಮಿಕ ಕಾಂಗ್ರೆಸ್ಸಿನ ಹಿರಿಯ 9 ಜನ ಕಾರ್ಯಕರ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ನಡೆಸಲಾಯಿತು.ಸಭೆಯಲ್ಲಿ ಜಿಲ್ಲಾ ಕಾರ್ಯದರ್ಶಿಯಾದ ನಿರಂಜನ್ ರೈ, ನಾರಾಯಣ ಮಚ್ಚಿನ, ಕೆವಿ ಜಾರ್ಜ್, ಗ್ರಾಮೀಣ ಅಧ್ಯಕ್ಷ ತುಕ್ರಂ ಗೌಡ ಹಾಗೂ ಸೇವಾದಳದ ಅಧ್ಯಕ್ಷ ಯೂಸುಫ್, ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷ ಕರೀಂ, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಮಹಿಳಾ ಕಾಂಗ್ರೆಸ್ಸಿನ ಜಿಲ್ಲಾ ಕಾರ್ಯದರ್ಶಿ ಜೀನತ್, ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ಸಿನ ಅಧ್ಯಕ್ಷ ಸತೀಶ್ ಬಂಗೇರ ಹಾಗೂ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯೆ ಸೌಮ್ಯ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ಸಿನ ಕಾರ್ಯದರ್ಶಿ ಇಸ್ಮಾಯಿಲ್, ವಿಕ್ರಮ್ ತಣ್ಣೀರುಪಂತ, ಪ್ರಮೋದ್ ಮಚ್ಚಿನ, ಐಬು ಕರಾಯ ಉಪಸ್ಥಿತರಿದ್ದರು.

ಬೆಳ್ತಂಗಡಿ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ಸಿನ ನಗರ ಅಧ್ಯಕ್ಷ ಅಬ್ದುಲ್ ರಜಾಕ್ ಸ್ವಾಗತಿಸಿದರು.

Related posts

ಉಜಿರೆ: ನೀರಚಿಲುಮೆ ಬಳಿ ಕೆಎಸ್‌ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು, ಸಹಸವಾರ ಗಾಯ

Suddi Udaya

ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

Suddi Udaya

ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya

ಎಂಡೋಸಲ್ಫಾನ್ ಸಂತ್ರಸ್ಥರಿಂದ ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ: ಚುನಾವಣಾ ಆಯೋಗ ಭೇಟಿ

Suddi Udaya
error: Content is protected !!