23.7 C
ಪುತ್ತೂರು, ಬೆಳ್ತಂಗಡಿ
April 24, 2026
ಬೆಳ್ತಂಗಡಿರಾಜಕೀಯ

ಅಸಂಘಟಿತ ಕಾರ್ಮಿಕ ನಗರ ಸಮಿತಿ & ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ & ಕಾರ್ಯಕರ್ತರ ಸಮಲೋಚನೆ ಸಭೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಅಸಂಗಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಹಾಗೂ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಇದರ ಜಂಟಿ ಆಶ್ರಯದಲ್ಲಿ ಜು.5 ರಂದು ಬೆಳ್ತಂಗಡಿ ನಗರ ಕಾಂಗ್ರೆಸ್ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕ ನಗರ ಸಮಿತಿ ಹಾಗೂ ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಮಲೋಚನೆ ಸಭೆ ಜರಗಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಸಂಘಟನೆಯ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಅಧ್ಯಕ್ಷತೆಯನ್ನು ಜಿಲ್ಲಾ ಸಂಘಟಿತ ಕಾರ್ಮಿಕ ಕಾಂಗ್ರೆಸಿನ ಅಧ್ಯಕ್ಷ ಅಬ್ಬಾಸ್ ಆಲಿ ವಹಿಸಿ ಮಾತನಾಡಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿಯನ್ನು ಬಲಿಷ್ಠಗೊಳಿಸಲು ಹಾಗೂ ಮುಂದಿನ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಗ್ರಾಮ ಪಂಚಾಯತ್ ಚುನಾವಣೆಯನ್ನು ಗೆಲ್ಲಿಸಲು ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಶ್ರಮಿಸಬೇಕು. ಸರಕಾರದಿಂದ ಸಿಗುವ ಪ್ರತಿಯೊಂದು ಸೌಲಭ್ಯವು ಕಾರ್ಮಿಕರಿಗೆ ತಲುಪಿಸುವ ಕೆಲಸವನ್ನು ಸಂಘಟಕರು ಮಾಡಬೇಕು ಎಂದರು.

ಅಸಂಗಡಿತ ಕಾರ್ಮಿಕ ಕಾಂಗ್ರೆಸ್ಸಿನ ಹಿರಿಯ 9 ಜನ ಕಾರ್ಯಕರ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ನಡೆಸಲಾಯಿತು.ಸಭೆಯಲ್ಲಿ ಜಿಲ್ಲಾ ಕಾರ್ಯದರ್ಶಿಯಾದ ನಿರಂಜನ್ ರೈ, ನಾರಾಯಣ ಮಚ್ಚಿನ, ಕೆವಿ ಜಾರ್ಜ್, ಗ್ರಾಮೀಣ ಅಧ್ಯಕ್ಷ ತುಕ್ರಂ ಗೌಡ ಹಾಗೂ ಸೇವಾದಳದ ಅಧ್ಯಕ್ಷ ಯೂಸುಫ್, ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷ ಕರೀಂ, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಮಹಿಳಾ ಕಾಂಗ್ರೆಸ್ಸಿನ ಜಿಲ್ಲಾ ಕಾರ್ಯದರ್ಶಿ ಜೀನತ್, ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ಸಿನ ಅಧ್ಯಕ್ಷ ಸತೀಶ್ ಬಂಗೇರ ಹಾಗೂ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯೆ ಸೌಮ್ಯ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ಸಿನ ಕಾರ್ಯದರ್ಶಿ ಇಸ್ಮಾಯಿಲ್, ವಿಕ್ರಮ್ ತಣ್ಣೀರುಪಂತ, ಪ್ರಮೋದ್ ಮಚ್ಚಿನ, ಐಬು ಕರಾಯ ಉಪಸ್ಥಿತರಿದ್ದರು.

ಬೆಳ್ತಂಗಡಿ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ಸಿನ ನಗರ ಅಧ್ಯಕ್ಷ ಅಬ್ದುಲ್ ರಜಾಕ್ ಸ್ವಾಗತಿಸಿದರು.

Related posts

ಅಕ್ರಮ ಗೋ ಮಾಂಸ ಮಾರಾಟ ಪ್ರಕರಣ: ಆರೋಪಿಯ ಮನೆ ಆವರಣ ಜಪ್ತಿ

Suddi Udaya

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಗಂಗಾ ಆರತಿ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

Suddi Udaya
error: Content is protected !!