37.9 C
ಪುತ್ತೂರು, ಬೆಳ್ತಂಗಡಿ
March 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಪ.ಪೂ. ಕಾಲೇಜು: ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು. ಕಾರ್ಯ ಚಟುವಟಿಕೆಗಳನ್ನು ಉಜಿರೆ ಎಸ್.ಡಿ.ಎಂ. ಕಾಲೇಜು (ಸ್ವಾಯತ್ತ) ಇಲ್ಲಿನ ಅರ್ಥ ಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿಭಾಗದ ಮುಖ್ಯಸ್ಥ ಡಾ. ಗಣರಾಜ್ ಕೆ. ರವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು “ಸೇವೆಯೇ ಧ್ಯೇಯವಾಗಿರುವ ರಾಷ್ಟ್ರೀಯ ಸೇವಾ ಯೋಜನೆಯು ದೇಶದ ಅಭಿವೃದ್ಧಿಗೆ ಬಹಳ ಕೊಡುಗೆ ನೀದಿದೆ. ಅಲ್ಲದೆ ಸ್ವಯಂ ಸೇವಕರಿಗೆ ಸಮಾಜದ ಜೊತೆ ಒಡನಾಟವನ್ನು ಬೆಳೆಸಿ ಅವರ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿ. ಆದುದರಿಂದ ತಮ್ಮನ್ನು ಅದರಲ್ಲಿ ತೊಡಗಿಸಿಕೊಂಡು ಉತ್ತಮ ವ್ಯಕ್ತಿತ್ವ ಮೂಡಿಸಿಕೊಳ್ಳಬೇಕು” ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಚಾರ್ಯ ಪ್ರಮೋದ್ ಕುಮಾರ್ ರವರು “ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯು ಅತ್ಯುತ್ತಮ ಕಾರ್ಯಕ್ರಮಗಳ ಮೂಲಕ ಯಶಸ್ವಿಯಾಗಿ ಮುನ್ನಡೆದುಕೊಂಡು ಬಂದಿದೆ. ಇಲ್ಲಿನ ಸ್ವಯಂ ಸೇವಕರು ರಾಜ್ಯ,ರಾಷ್ಟ್ರ ಮಟ್ಟದ ಶಿಬಿರದಲ್ಲಿ ಭಾಗವಹಿಸಿದ್ದಾರೆ.

ಮುಂದೆಯೂ ಇಂತಹ ಸಾಧನೆಗಳು ಮರುಕಳಿಸಲಿ “ಎಂದು ಹೇಳಿದರು.ವೇದಿಕೆಯಲ್ಲಿ ಉಪಪ್ರಾಂಶುಪಾಲ ಡಾ. ರಾಜೇಶ್ ಬಿ. ನಿಕಟ ಪೂರ್ವ ಯೋಜನಾಧಿಕಾರಿಗಳಾದ ಡಾ. ಪ್ರಸನ್ನ ಕುಮಾರ್ ಐತಾಳ್, ಯೋಜನಾಧಿಕಾರಿಗಳಾದ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶ್ರೀಮತಿ ಶೋಭಾ ಪಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಲಹಾ ಸಮಿತಿ ಸದಸ್ಯರಾದ ದಿವ್ಯ ಕುಮಾರಿ ಹಾಗೂ ನಾಗರಾಜ್ ಭಂಡಾರಿರವರು ಉಪಸ್ಥಿತರಿದ್ದರು.ಸ್ವಯಂ ಸೇವಕಿಯರಾದ ಧನ್ಯ ನಿರೂಪಿಸಿ, ಮೇಘ ಸ್ವಾಗತಿಸಿ, ಗ್ರಂಥ ಧನ್ಯವಾದವಿತ್ತರು.

Related posts

ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರ ನೂತನ ಕಚೇರಿ ಉದ್ಘಾಟನೆ

Suddi Udaya

ಚಿನ್ನವನ್ನು ತೊಳೆದುಕೊಡುವುದಾಗಿ ಹೇಳಿದಾತ ಸರದೊಂದಿಗೆ ಪರಾರಿ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

Suddi Udaya

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ‌ ಸ್ಥಾನ: ಸೈಂಟ್ ಮೆರೀಸ್ ಆಂ.ಮಾ. ಶಾಲಾ ವಿದ್ಯಾರ್ಥಿನಿ ಸಂಜನಾ ಎಂ.ಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya
error: Content is protected !!