25.5 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಪ.ಪೂ. ಕಾಲೇಜು: ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು. ಕಾರ್ಯ ಚಟುವಟಿಕೆಗಳನ್ನು ಉಜಿರೆ ಎಸ್.ಡಿ.ಎಂ. ಕಾಲೇಜು (ಸ್ವಾಯತ್ತ) ಇಲ್ಲಿನ ಅರ್ಥ ಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿಭಾಗದ ಮುಖ್ಯಸ್ಥ ಡಾ. ಗಣರಾಜ್ ಕೆ. ರವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು “ಸೇವೆಯೇ ಧ್ಯೇಯವಾಗಿರುವ ರಾಷ್ಟ್ರೀಯ ಸೇವಾ ಯೋಜನೆಯು ದೇಶದ ಅಭಿವೃದ್ಧಿಗೆ ಬಹಳ ಕೊಡುಗೆ ನೀದಿದೆ. ಅಲ್ಲದೆ ಸ್ವಯಂ ಸೇವಕರಿಗೆ ಸಮಾಜದ ಜೊತೆ ಒಡನಾಟವನ್ನು ಬೆಳೆಸಿ ಅವರ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿ. ಆದುದರಿಂದ ತಮ್ಮನ್ನು ಅದರಲ್ಲಿ ತೊಡಗಿಸಿಕೊಂಡು ಉತ್ತಮ ವ್ಯಕ್ತಿತ್ವ ಮೂಡಿಸಿಕೊಳ್ಳಬೇಕು” ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಚಾರ್ಯ ಪ್ರಮೋದ್ ಕುಮಾರ್ ರವರು “ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯು ಅತ್ಯುತ್ತಮ ಕಾರ್ಯಕ್ರಮಗಳ ಮೂಲಕ ಯಶಸ್ವಿಯಾಗಿ ಮುನ್ನಡೆದುಕೊಂಡು ಬಂದಿದೆ. ಇಲ್ಲಿನ ಸ್ವಯಂ ಸೇವಕರು ರಾಜ್ಯ,ರಾಷ್ಟ್ರ ಮಟ್ಟದ ಶಿಬಿರದಲ್ಲಿ ಭಾಗವಹಿಸಿದ್ದಾರೆ.

ಮುಂದೆಯೂ ಇಂತಹ ಸಾಧನೆಗಳು ಮರುಕಳಿಸಲಿ “ಎಂದು ಹೇಳಿದರು.ವೇದಿಕೆಯಲ್ಲಿ ಉಪಪ್ರಾಂಶುಪಾಲ ಡಾ. ರಾಜೇಶ್ ಬಿ. ನಿಕಟ ಪೂರ್ವ ಯೋಜನಾಧಿಕಾರಿಗಳಾದ ಡಾ. ಪ್ರಸನ್ನ ಕುಮಾರ್ ಐತಾಳ್, ಯೋಜನಾಧಿಕಾರಿಗಳಾದ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶ್ರೀಮತಿ ಶೋಭಾ ಪಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಲಹಾ ಸಮಿತಿ ಸದಸ್ಯರಾದ ದಿವ್ಯ ಕುಮಾರಿ ಹಾಗೂ ನಾಗರಾಜ್ ಭಂಡಾರಿರವರು ಉಪಸ್ಥಿತರಿದ್ದರು.ಸ್ವಯಂ ಸೇವಕಿಯರಾದ ಧನ್ಯ ನಿರೂಪಿಸಿ, ಮೇಘ ಸ್ವಾಗತಿಸಿ, ಗ್ರಂಥ ಧನ್ಯವಾದವಿತ್ತರು.

Related posts

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

Suddi Udaya

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya

ಶ್ರೀ ಸತ್ಯಚಾವಡಿ ತರವಾಡು ಮನೆಯ ಪ್ರವೇಶೋತ್ಸವ, ದೈವ ದೇವರುಗಳ ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ:

Suddi Udaya

ಬೆಳ್ತಂಗಡಿ: ಡಾ. ಸುಶ್ಮಿತಾ ಸಿ ಎಚ್ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಉಜಿರೆಯ ಬೆನಕ ಆಸ್ಪತ್ರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ಕಲ್ಮಂಜ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!