22.6 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಪ.ಪೂ. ಕಾಲೇಜು: ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು. ಕಾರ್ಯ ಚಟುವಟಿಕೆಗಳನ್ನು ಉಜಿರೆ ಎಸ್.ಡಿ.ಎಂ. ಕಾಲೇಜು (ಸ್ವಾಯತ್ತ) ಇಲ್ಲಿನ ಅರ್ಥ ಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿಭಾಗದ ಮುಖ್ಯಸ್ಥ ಡಾ. ಗಣರಾಜ್ ಕೆ. ರವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು “ಸೇವೆಯೇ ಧ್ಯೇಯವಾಗಿರುವ ರಾಷ್ಟ್ರೀಯ ಸೇವಾ ಯೋಜನೆಯು ದೇಶದ ಅಭಿವೃದ್ಧಿಗೆ ಬಹಳ ಕೊಡುಗೆ ನೀದಿದೆ. ಅಲ್ಲದೆ ಸ್ವಯಂ ಸೇವಕರಿಗೆ ಸಮಾಜದ ಜೊತೆ ಒಡನಾಟವನ್ನು ಬೆಳೆಸಿ ಅವರ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿ. ಆದುದರಿಂದ ತಮ್ಮನ್ನು ಅದರಲ್ಲಿ ತೊಡಗಿಸಿಕೊಂಡು ಉತ್ತಮ ವ್ಯಕ್ತಿತ್ವ ಮೂಡಿಸಿಕೊಳ್ಳಬೇಕು” ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಚಾರ್ಯ ಪ್ರಮೋದ್ ಕುಮಾರ್ ರವರು “ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯು ಅತ್ಯುತ್ತಮ ಕಾರ್ಯಕ್ರಮಗಳ ಮೂಲಕ ಯಶಸ್ವಿಯಾಗಿ ಮುನ್ನಡೆದುಕೊಂಡು ಬಂದಿದೆ. ಇಲ್ಲಿನ ಸ್ವಯಂ ಸೇವಕರು ರಾಜ್ಯ,ರಾಷ್ಟ್ರ ಮಟ್ಟದ ಶಿಬಿರದಲ್ಲಿ ಭಾಗವಹಿಸಿದ್ದಾರೆ.

ಮುಂದೆಯೂ ಇಂತಹ ಸಾಧನೆಗಳು ಮರುಕಳಿಸಲಿ “ಎಂದು ಹೇಳಿದರು.ವೇದಿಕೆಯಲ್ಲಿ ಉಪಪ್ರಾಂಶುಪಾಲ ಡಾ. ರಾಜೇಶ್ ಬಿ. ನಿಕಟ ಪೂರ್ವ ಯೋಜನಾಧಿಕಾರಿಗಳಾದ ಡಾ. ಪ್ರಸನ್ನ ಕುಮಾರ್ ಐತಾಳ್, ಯೋಜನಾಧಿಕಾರಿಗಳಾದ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶ್ರೀಮತಿ ಶೋಭಾ ಪಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಲಹಾ ಸಮಿತಿ ಸದಸ್ಯರಾದ ದಿವ್ಯ ಕುಮಾರಿ ಹಾಗೂ ನಾಗರಾಜ್ ಭಂಡಾರಿರವರು ಉಪಸ್ಥಿತರಿದ್ದರು.ಸ್ವಯಂ ಸೇವಕಿಯರಾದ ಧನ್ಯ ನಿರೂಪಿಸಿ, ಮೇಘ ಸ್ವಾಗತಿಸಿ, ಗ್ರಂಥ ಧನ್ಯವಾದವಿತ್ತರು.

Related posts

ಆ.25: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಮಕ್ಕಳಿಗೆ ತಾಲೂಕು ಮಟ್ಟದ ಮುದ್ದುಕೃಷ್ಣ ,ಬಾಲಕೃಷ್ಣ, ಕೃಷ್ಣ ವೇಷ ಸ್ಪರ್ಧೆ, ಹೆಸರು ನೊಂದಾಯಿಸಲು ಕೊ.ದಿ. ಆ. 20-2024, ಮಾಹಿತಿಗಾಗಿ 8971689755 ಸಂಪರ್ಕಿಸಿರಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘದ ಇತಿಹಾಸದಲ್ಲಿಯೇ ನಿರಂತರ 7ನೇ ಬಾರಿಗೆ 1 ಕೋಟಿ ರೂ.ಗೂ ಮಿಕ್ಕಿ ಲಾಭ ದಾಖಲೆ: ಸುಂದರ ಹೆಗ್ಡೆ ರೂ.1.86 ಕೋಟಿ ನಿವ್ವಳ ಲಾಭ,ಸದಸ್ಯರಿಗೆ ಶೇ.20 ಡಿವಿಡೆಂಟ್

Suddi Udaya

ಬಾವಂತಬೆಟ್ಟು ಬಾಬು ಶೆಟ್ಟಿ ನಿಧನ

Suddi Udaya

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Suddi Udaya

ತಾಲೂಕು ಮಟ್ಟದ ಶಟಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!