ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

ಕೊಕ್ರಾಡಿ: ಅತೀವ ಮಳೆಯಿಂದ ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಸಾರ್ವಜನಿಕರು ಓಡಾಟ ನಡೆಸಲು ಕಷ್ಟವಾಗಿದೆ.

ಸೇತುವೆ ನಿರ್ಮಾಣದ ವಿಚಾರಕ್ಕೆ ಸರಕಾರಕ್ಕೆ ಅನೇಕ ಭಾರಿ ಮನವಿ ಸಲ್ಲಿಸಿದರು ಇನ್ನೂ ಭೇಡಿಕೆ ಈಡೇರಿಲ್ಲ.ಇದರಿಂದ ಸಾರ್ವಜನಿಕರಿಗೆ,ಉದ್ಯೋಗಸ್ಥರಿಗೆ,ವಿದ್ಯಾರ್ಥಿಗಳಿಗೆ ಸಂಚಾರಕ್ಕೆ ತುಂಬಾ ಸಮಸ್ಯೆಯಾಗಿದೆ.

ಇದೀಗ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ,ಅಂಡಿಂಜೆ ಗ್ರಾಮ‌ ಪಂಚಾಯತ್ ಸದಸ್ಯ ಜಗದೀಶ್ ಹೆಗ್ಡೆ ನೇತೃತ್ವದಲ್ಲಿ ಹಾಗೂ ಭಾರತೀಯ ಜನತಾ ಪಾರ್ಟಿಯ ಗ್ರಾಮ ಸಮಿತಿ ಹಾಗೂ ಊರಿನವರ ಸಹಕಾರದಿಂದ ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆಗೆ ಅಡಿಕೆ ಮರದ ತಾತ್ಕಾಲಿಕ ಸೇತುವೆಯನ್ನು ನಿರ್ಮಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಈ ಸಂದರ್ಭದಲ್ಲಿ ಬಿಜೆಪಿ ಶಕ್ತಿಕೇಂದ್ರದ ಅದ್ಯಕ್ಷ ಜಗದೀಶ್ ಹೆಗ್ಡೆ, ಕೊಕ್ರಾಡಿ ಬೂತ್ ಸಮಿತಿ ಅಧ್ಯಕ್ಷ ನೀಲಕಂಠ ಪ್ರಸಾದ್,ಕಾರ್ಯದರ್ಶಿ ಲೋಹಿತ್,ಶಾರದಾಂಭ ಯುವಕ ಮಂಡಲದ ಸದಸ್ಯರು,ಸ್ಥಳಿಯರಾದ ಚಂದ್ರಶೇಖರ ಶೆಟ್ಟಿಗಾರ್ ,ಕರುಣಾಕರ,ಸುಜಿತ್,ಸಂಜೀವ, ಹರೀಶ್,ಬೋಜ ಶೆಟ್ಟಿ ಹಾಗೂ ಇತರರು ಇದ್ದರು. ಈ ಸಂದರ್ಭ ನಾರಾವಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಾಲತಾ ಭೇಟಿ ನೀಡಿದರು.

Related posts

ಪ್ರಿಕೆಜಿ ವಿದ್ಯಾರ್ಥಿ ಸಮಕ್ಷ್ ನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಗಡಿಯಾರ ಕೊಡುಗೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯ ಪಿ.ಕೆ ಮುಹಮ್ಮದ್ ಮದನಿ ಅಳಕ್ಕೆ ಉಸ್ತಾದರಿಗೆ ಸನ್ಮಾನ

Suddi Udaya

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya

ಉಜಿರೆ ಬಂಟರ ಸಂಘ ಗ್ರಾಮ ಸಮಿತಿಯಿಂದ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಬುರುಡೆ ಪ್ರಕರಣದ ತನಿಖೆ ಪೂರ್ಣಗೊಂಡಿಲ್ಲ: ಗೃಹ ಸಚಿವ ಪರಮೇಶ್ವರ್

Suddi Udaya
error: Content is protected !!