September 6, 2026
Uncategorized

ನಮ್ಮ ಬದುಕನ್ನು ರೂಪಿಸುವ ಅಡಿಪಾಯವೇ ಶಿಕ್ಷಣ-ಡಾ. ನವೀನ್ ಕುಮಾರ್ ಜೈನ್.

“ಬೆಳ್ತಂಗಡಿ : ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ತಮ್ಮ ಬದುಕನ್ನು ಸುಂದರವಾಗಿಸಲು ಹಾಗೂ ಗಟ್ಟಿಗೊಳಿಸಲು ಶಿಕ್ಷಣವು ಬಹಳ ಮುಖ್ಯವಾಗಿ ಬೇಕೇ ಬೇಕು. ಆದ್ದರಿಂದ ಪ್ರತಿಯೊಬ್ಬ ನಮ್ಮ ಸಮಾಜದ ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಅತಿಹೆಚ್ಚಿನ ಗಮನವನ್ನು ನೀಡಿದರೆ ತಮ್ಮ ಬದುಕನ್ನು ಸುಂದರವಾಗಿಸಲು ಸಾಧ್ಯ. ಅಂತಹ ಮೂಲ ಉದ್ದೇಶವನ್ನು ಇಟ್ಟುಕೊಂಡು ಬೆಳ್ತಂಗಡಿಯ ಜೈನ ಮಹಿಳಾ ಸಮಾಜದವರು ಈ ಕಾರ್ಯಕ್ರಮವನ್ನು ಇಟ್ಟುಕೊಂಡಿರುವುದು ನಮ್ಮ ಬೇರೆ ಸಂಸ್ಥೆಯವರಿಗೆ ಮಾದರಿಯಾಗಿದೆ” ಎಂದು ಡಾ| ನವೀನ್ ಕುಮಾರ್ ಜೈನ್ ಹೇಳಿದರು.
ಅವರು ಬೆಳ್ತಂಗಡಿಯ ಜೈನ ಮಹಿಳಾ ಸಮಾಜ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದ ಪಿನಾಕಿ ಹಾಲಿನಲ್ಲಿ ಜೂನ್ 29ರಂದು ಏರ್ಪಡಿಸಿರುವ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಜೈನ ಮಹಿಳಾ ಸಮಾಜದ ಸದಸ್ಯರ ಮಕ್ಕಳಿಗೆ ವಿದ್ಯಾ ಪ್ರೋತ್ಸಾಹ ಧನವನ್ನು ವಿತರಿಸಿ ಮಾತನಾಡಿದರು.
ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಜೈನ ಮಹಿಳಾ ಸಮಾಜದ ಅಧ್ಯಕ್ಷರಾಗಿರುವ ಪ್ರೊಫೆಸರ್ ತ್ರಿಶಾಲ ಜೈನ್ ಇವರು *ತಾವು ನಮ್ಮ ಸಮಾಜದ ಆಸ್ತಿಯಾಗಬೇಕು ಮಾತ್ರವಲ್ಲದೆ ಯಾವತ್ತೂ ತಮ್ಮ ತಂದೆ ಹಾಗೂ ತಾಯಿ ಮತ್ತು ಗುರುಗಳನ್ನು ಮರೆಯದೆ ತಮ್ಮ ಬದುಕಿನಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ಪಡೆದು ಸಮಾಜದ ರತ್ನಗಳಾಗಿ ಮಿನುಗ ಬೇಕು. ಆಗ ನಮ್ಮ ಸಮಾಜದ ಈ ಕಾರ್ಯಕ್ಕೆ ತಾವು ಕೊಡುವ ಬಹಳ ದೊಡ್ಡ ಕೊಡುಗೆಯಾಗುತ್ತದೆ ಎಂದು ಹೇಳಿದರು. ವೇದಿಕೆಯಲ್ಲಿ ಜೈನ ಮಹಿಳಾ ಸಮಾಜದ ಹಿರಿಯ ಸದಸ್ಯರಾದ ಶ್ರೀಮತಿ ಮಮತಾ ಎಂ ಆರ್ ಜೈನ್ ಹಾಗೂ ಪ್ರಧಾನ ಕಾರ್ಯದರ್ಶಿ, ಶ್ರೀಮತಿ ರಾಜಶ್ರೀ ಎಸ್ ಹೆಗ್ಡೆ, ಕೋಶಾಧಿಕಾರಿ ಶ್ರೀಮತಿ ಅನುಪಮಾ ಜೈನ್ ಉಪಸ್ಥಿತರಿದ್ದರು.
ಆರಂಭದಲ್ಲಿ ಮಕ್ಕಳ ಪ್ರಾರ್ಥನೆಯೊಂದಿಗೆ ಸಭೆ ಆರಂಭಗೊಂಡು, ಜೈನ ಸಮಾಜದ ಕಾರ್ಯದರ್ಶಿ ಶ್ರೀಮತಿ ರಾಜಶ್ರೀ ಎಸ್ ಹೆಗ್ಡೆ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರೆ, ಶ್ರೀಮತಿ ಉಷಾ ಧನ್ಯವಾದ ಸಲ್ಲಿಸಿ, ಶ್ರೀಮತಿ ದವಳ ಕಾರ್ಯಕ್ರಮ ಸಂಯೋಜಿಸಿ, ಶ್ರೀಮತಿ ತ್ರಿಶಾಲ ಧನ್ಯವಾದ ಸಲ್ಲಿಸುವುದರೊಂದಿಗೆ ಕಾರ್ಯಕ್ರಮ ಸಮಾಪನಗೊಂಡಿತು

Related posts

ಹೆದ್ದಾರಿ ಬದಿ ಬೆಂಕಿ

Suddi Udaya

ಕಳಿಯ ಕುಂಟಿನಿ ನಿವಾಸಿ ಹರಿಪ್ರಸಾದ್ ಭಟ್ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ತೀರ ಬಡತನದ ಕುಟುಂಬಕ್ಕೆ ಸಹಾಯಹಸ್ತ ನೀಡಿದ ಧಾರ್ಮಿಕ ಮುಖಂಡ ಪುಷ್ಪಗಿರಿ

Suddi Udaya

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ

Suddi Udaya
error: Content is protected !!