23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮಂಜ್ಜೊಟ್ಟಿ ಹೋಲಿ ಕ್ರಾಸ್ ಚರ್ಚ್ ನಲ್ಲಿ “ಲಾವ್ದಾತೊ ಸಿ ಭಾನುವಾರ -2025”- ಪರಿಸರ ದಿನಾಚರಣೆ

ಮಂಜ್ಜೊಟ್ಟಿ: ಹೋಲಿ ಕ್ರಾಸ್ ಚರ್ಚ್, ಮಂಜ್ಜೊಟ್ಟಿಯಲ್ಲಿ ಇಂದು ( ಜುಲೈ 7) ಬೆಳಿಗ್ಗೆ 10 ಗಂಟೆಗೆ ಸರಿಯಾಗಿ “ಲಾವ್ದಾತೊ ಸಿ ಭಾನುವಾರ -2025”– ಪರಿಸರ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚರ್ಚಿನ ಧರ್ಮಗುರುಗಳು ವಂದನೀಯ ಫಾ| ಪಾವ್ಲ್ ಸೆಬಾಸ್ಟಿಯನ್ ಡಿಸೋಜರವರು ವಹಿಸಿ, ಸಾಂಕೇತಿಕ ರೀತಿಯಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, “ಪ್ರತಿಯೊಬ್ಬರು ಪ್ರಕೃತಿ- ಸಂಮೃದ್ದಿಯ ಕಡೆಗೆ ತಮ್ಮ ಕೊಡುಗೆಯನ್ನು ನೀಡಬೆಕೇಂದು ಕರೆ ನೀಡಿದರು.”

ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಮಾರ್ಕ್ ಡಿಸೋಜ, ಹಾಗೂ ಕಾರ್ಯದರ್ಶಿಯಾದ ಶ್ರೀಮತಿ ಐರಿನ್ ಸಿಕ್ವೇರಾ, 21 ಆಯೋಗದ ಸಂಯೋಜಕರಾದ ವಿನೋದ್ ಪಿಂಟೊ, ಪರಿಸರ ಆಯೋಗದ ಸಂಚಲಕರಾದ ಲ್ಯಾನ್ಸಿ ಲೋಬೊ, ಕಥೊಲಿಕ್ ಸಭಾ ಅಧ್ಯಕ್ಷರಾದ ಕ್ಲೇವಿನ್ ಮಿರಾಂದಾ ಮತ್ತು ಐಸಿವೈಮ್ ಸಂಘಟನೆಯ ಸದಸ್ಯರು ಹಾಜರಿದ್ದು ಎಲ್ಲರ ಸಹಯೋಗದೊಂದಿಗೆ ಕಾರ್ಯಕ್ರಮವು ಅಚ್ಚುಕಟ್ಟಾಗಿ ನೆರವೇರಿತು.

ಈ ದಿನದ ಪ್ರಮುಖ ಭಾಗವಾಗಿ “ಮನೆಗೊಂದು ಗಿಡ, ಕುಟುಂಬಕೊಂದು ಮರ” ಎಂಬ ಧ್ಯೇಯವಾಕ್ಯದೊಂದಿಗೆ ಪ್ರತೀ ಕುಟುಂಬಕೊಂದು ಹಲಸು, ಹೆಬ್ಬಲಸು, ನೇರಳೆ, ಪುನರ್ಪಳಿ ಮತ್ತು ರಂಬುಟನ್ ಹೀಗೆ ವಿವಿಧ ಜಾತಿಯ ಗಿಡಗಳನ್ನು ವಿತರಿಸಲಾಯಿತು. .

Related posts

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿರದಲ್ಲಿ ನೋಂಪಿ

Suddi Udaya

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಬೆಳ್ತಂಗಡಿಯಲ್ಲಿ ಮಿಡ್ಲ್ ಕ್ಲಾಸ್ ಫ್ಯಾಮಿಲಿ ಚಿತ್ರತಂಡ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ
ಎಕ್ಸ್‌ಪೀರಿಯ-2ಕೆ22 ರಾಜ್ಯ ಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

Suddi Udaya

ಕಾಯರ್ತಡ್ಕ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಆಚರಣೆ

Suddi Udaya
error: Content is protected !!