September 6, 2026
ವರದಿಸಂಘ-ಸಂಸ್ಥೆಗಳು

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ ಪ್ರಾಯೋಜಿತ ಕೌಶಲ್ಯ ಅಭಿವೃದ್ಧಿ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

ತಣ್ಣೀರುಪಂತ: ಮಂಗಳೂರು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಪ್ರಾಯೋಜಕತ್ವದಲ್ಲಿ, ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್ ಇವರ ನೇತೃತ್ವದಲ್ಲಿ, ಒಂದು ತಿಂಗಳ ಬ್ರೈಡಲ್ ಮೇಕ್ಅಪ್ ಹಾಗೂ ಟೈಲರಿಂಗ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ತಣ್ಣೀರುಪಂತ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣ ಕಲ್ಲೇರಿಯಲ್ಲಿ ನಡೆಯಿತು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹನಾಧಿಕಾರಿ ಜ್ಯೋತಿ ರಾಜ್ ತರಬೇತಿ ಉದ್ಘಾಟಿಸಿ ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರಿಗೆ ಶುಭ ಕೋರಿದರು. ಇತ್ತೀಚಿನ ದಿನಗಳಲ್ಲಿ ಬ್ರೈಡಲ್ ಮೇಕ್ಅಪ್ ಹಾಗೂ ಟೈಲರಿಂಗ್ ತರಬೇತಿಗೆ ಹೆಚ್ಚಿನ ಬೇಡಿಕೆಯಿದ್ದು, ತರಬೇತಿಯನ್ನು ಉತ್ತಮ ಮಟ್ಟದಲ್ಲಿ ಪಡೆದು ಮಹಿಳೆಯರು ಮುಂದೆ ಹೆಚ್ಚಿನ ಕೌಶಲ್ಯ ಪಡೆಯಲು ಪ್ರೇರೇಪಿಸಿದರು ಹಾಗೂ ತರಬೇತಿ ನಂತರ ಬ್ಯಾಂಕ್ ನಿಂದ ಸಿಗುವ ಸಾಲ ಸೌಲಭ್ಯ ಪಡೆದು ಸ್ವ ಉದ್ಯೋಗ ಪ್ರಾರಂಭಿಸಲು ಸಲಹೆ ನೀಡಿದರು.

ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ತರಬೇತಿಯ ನಿಯಮಗಳ ಬಗ್ಗೆ ವಿವರಿಸಿ, ತರಬೇತಿಯಲ್ಲಿ ಪಡೆದ ಕೌಶಲ್ಯವನ್ನು ಸ್ವ ಉದ್ಯೋಗ ಮಾಡುವಲ್ಲಿ ಪರಿವರ್ತನೆ ಮಾಡಲು ಕರೆ ನೀಡಿದರು. ವೇದಿಕೆಯಲ್ಲಿ ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷೆ ಹೇಮಾವತಿ, ತಣ್ಣೀರುಪಂತ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಜಯರಾಜ್ ಜೈನ್, ಬ್ರೈಡಲ್ ಮೇಕ್ಅಪ್ ತರಬೇತುದಾರೆ ಸಂಧ್ಯಾ, ಟೈಲರಿಂಗ್ ತರಬೇತುದಾರೆ ಮೀನಾಕ್ಷಿ ಉಪಸ್ಥಿತರಿದ್ದರು.

ಸ್ನೇಹ ಕಾರ್ಯಕ್ರಮ ನಿರೂಪಿಸಿ, ಸುಮ ಸ್ವಾಗತಿಸಿ, ಶಿಲ್ಪಾ ಧನ್ಯವಾದ ಗೈದರು. ಕಲ್ಲೇರಿ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 30 ಮಹಿಳೆಯರು ಈ ತಿಂಗಳ ತರಬೇತಿ ಪಡೆಯಲಿದ್ದಾರೆ.

Related posts

ನ್ಯೂ ವೈಬ್ರೆಂಟ್ ಪ.ಪೂ. ಕಾಲೇಜಿನಲ್ಲಿ ಹಿರೋಷಿಮಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಜಾಗದ ದಾರಿ ಹಕ್ಕಿಗಾಗಿ ಹರಿಪ್ರಸಾದ್ ಇರ್ವತ್ರಾಯ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಧರಣಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

Suddi Udaya

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya
error: Content is protected !!