25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಶಾಂತಿಶ್ರೀ ‘ ಜೈನ ಮಹಿಳಾ ಸಮಾಜದ ವತಿಯಿಂದ, ‘ ಶೈಕ್ಷಣಿಕ ಕಾರ್ಯಕ್ರಮ ‘

ಬೆಳ್ತಂಗಡಿ : ಶಾಂತಿಶ್ರೀ ‘ ಜೈನ ಮಹಿಳಾ ಸಮಾಜದ ವತಿಯಿಂದ, ‘ ಶೈಕ್ಷಣಿಕ ಕಾರ್ಯಕ್ರಮ ‘ ವನ್ನು ಬೆಳ್ತಂಗಡಿ ಶ್ರೀ. ಧ. ಮಂ. ಕಲಾ ಭವನದಲ್ಲಿ ಜೂ. 29 ರಂದು ನಡೆಯಿತು.ಮುಖ್ಯ ಅತಿಥಿಗಳಾಗಿ ಶ್ರೀ. ಧ. ಮಂ. ಕಾಲೇಜು, ಉಜಿರೆ, ಇಲ್ಲಿಯ ಉಪನ್ಯಾಸಕರು, ಜೈನ್ ಮಿಲನ್, ಬೆಳ್ತಂಗಡಿ ಇದರ ಅಧ್ಯಕ್ಷರೂ ಆಗಿರುವ ಡಾ| ನವೀನ್ ಕುಮಾರ್ ಜೈನ್ ರವರು ಭಾಗವಹಿಸಿ, ವಿಧ್ಯಾರ್ಥಿಗಳ ವಿದ್ಯಾರ್ಜನೆಗೆ ಪೂರಕವಾದಂತಹ ಸ್ಪೂರ್ತಿದಾಯಕ ಮಾತುಗಳನ್ನು ಹೇಳುತ್ತಾ, ಯಶಸ್ಸನ್ನು ಬಯಸುವುದಾದರೆ ಕಠಿಣ ಪರಿಶ್ರಮ ಅಗತ್ಯ ಎಂದು ಸಲಹೆ ನೀಡಿದರು. ಶೈಕ್ಷಣಿಕ ಕಾರ್ಯಕ್ರಮದಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜನೆ ಮಾಡಿರುವ, ‘ ಶಾಂತಿಶ್ರೀ ‘ ಜೈನ ಮಹಿಳಾ ಸಮಾಜದವರ ಈ ಹಿಂದಿನ ಎಲ್ಲಾ ಕಾರ್ಯ ಚಟುವಟಿಕೆಗಳು, ಯಶಸ್ವಿ ಕಾರ್ಯಕ್ರಮವಾಗಿದೆ ಎಂದು ಶ್ಲಾಘಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಶ್ರೀಮತಿ ಪ್ರೊ| ತ್ರಿಶಲಾ ಜೈನ್ ಕೆ ಎಸ್ ರವರು, ವಿಧ್ಯಾರ್ಥಿ ಜೀವನದಂತಹ ಸುವರ್ಣಾವಕಾಶಗಳು ಮತ್ತೊಮ್ಮೆ ಸಿಗುವುದಿಲ್ಲ. ಸಾಧನೆಯೊಂದಿದ್ದರೆ ಗುರಿ ತಲುಪಲು ಸಾಧ್ಯ ಎಂದು ಹೇಳುತ್ತಾ, ಸಮಾಜದ ಎಲ್ಲಾ ಸದಸ್ಯೆಯರ ಸಹಕಾರವನ್ನು ಅಭಿನಂದಿಸಿದರು.


ನಮ್ಮ ಸಮಾಜದ ಸದಸ್ಯೆಯರ 10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಉತ್ತೀರ್ಣರಾದ ಎಂಟು ಮಂದಿ ಮಕ್ಕಳಿಗೆ ವಿಧ್ಯಾರ್ಥಿ ಪ್ರೋತ್ಸಾಹ ಧನವನ್ನು ಸಂಘದ ದಾನಿಗಳ ಸಹಕಾರದಿಂದ ವಿತರಿಸಲಾಯಿತು. ಕಾರ್ಯದರ್ಶಿಯವರಾದ ಶ್ರೀಮತಿ ರಾಜಶ್ರೀ ಎಸ್ ಹೆಗ್ಡೆ ಯವರು ಸ್ವಾಗತದೊಂದಿಗೆ ಪ್ರಸ್ತಾವಿಕ ನುಡಿಗಳನ್ನಾಡಿದರು. ಶರ್ಮತಿ ಮತ್ತು ಬಳಗದವರು ಪಾರ್ಥನೆ ಹಾಡಿದರು, ಕೋಶಾಧಿಕಾರಿ ಶ್ರೀಮತಿ ಅನುಪ ಕುಮಾರಿ ಯವರು ಕಾರ್ಯಕ್ರಮ ಸಂಘಟಿಸಿದರು. ಶ್ರೀಮತಿ ತ್ರಿಶಲಾ ಅಥಿಕಾರಿ ಮತ್ತು ಶ್ರೀಮತಿ ದವಳ ರವರು ಕಾರ್ಯಕ್ರಮ ನಿರ್ವಹಿಸಿ, ಶ್ರೀಮತಿ ಉಷಾ ರವರು ಧನ್ಯವಾದ ನೀಡಿದರು.

Related posts

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ : ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

Suddi Udaya

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!