27 C
ಪುತ್ತೂರು, ಬೆಳ್ತಂಗಡಿ
June 21, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ನ ಓಲೈಕೆ ರಾಜಕಾರಣದಿಂದ ಶರಣ್ ಪಂಪುವೆಲ್ ರವರ ಮೇಲೆ ಕೇಸು ಖಂಡನೀಯ : ನವೀನ್ ನೆರಿಯ

ಬೆಳ್ತಂಗಡಿ: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದ ಗೋಹತ್ಯೆ ಪ್ರಕರಣವನ್ನು ಖಂಡಿಸಿ ಮಾಧ್ಯಮದಲ್ಲಿ ನೀಡಿದ ಹೇಳಿಕೆಯ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ. ಹಲವು ವರ್ಷಗಳಿಂದ ಅಕ್ರಮ ಗೋಸಾಗಾಟ, ಗೋಹತ್ಯೆ ಅಲ್ಲದೆ ಗೋಕಳ್ಳತನ ನಡೆಯುತ್ತಿದ್ದು ಕಳ್ಳರನ್ನು ಗೋಹಂತಕರನ್ನು ಬಂಧಿಸಲು ಹಾಗೂ ಗೋಹತ್ಯೆಯನ್ನು ನಿಲ್ಲಿಸಲು ಆಗದ ಸರಕಾರ ಹಾಗೂ ಕಾಂಗ್ರೆಸ್ ಪ್ರೇರಿತ ಅಧಿಕಾರಿಗಳು ಗೋಹತ್ಯೆ ವಿರುದ್ದ ಮಾತಾಡಿದ ಗೋಪ್ರೇಮಿಗಳ ಮೇಲೆ ಕೇಸು ಹಾಕಿರುವುದು ಖಂಡನೀಯ.

ಗೋಹತ್ಯೆ ಲವ್ ಜಿಹಾದ್ ಕಾರಣದಿಂದ ಗಲಭೆಗಳು ನಡೆದು ಜಿಲ್ಲೆ ಪ್ರಕ್ಷುಬ್ದವಾಗಿರುವ ಘಟನೆಗಳು ನಡೆದಿತ್ತು. ಈ ಗೋಮಾಫಿಯಾದ ಹಿಂದೆ ದೊಡ್ಡ ಜಾಲ ಕಾರ್ಯನಿರ್ವಹಿಸುತ್ತಿದ್ದು ಇದರ ಬಗ್ಗೆ ಮಾತನಾಡಿದನ್ನು ಕಾರಣವಾಗಿಟ್ಟುಕೊಂಡು ಕಾಂಗ್ರೆಸ್ಸಿನ ಓಲೈಕೆ ರಾಜಕೀಯಕೋಸ್ಕರ ಶರಣ್ ಪಂಪುವೆಲ್ ರವರ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ. ಇದರಿಂದ ಅಭಿವ್ಯಕ್ತ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಿದೆ. ಅಲ್ಲದೆ ಅವರಿಗೆ ಚಿಕ್ಕಮಗಳೂರು ಜಿಲ್ಲಾ ಪ್ರವೇಶ ನಿರ್ಬಂಧಿಸಿದ್ದಾರೆ ಇದೆಲ್ಲವೂ ಯಾರನ್ನೋ ಓಲೈಕೆ ಮಾಡಲು ಹಿಂದೂ ನಾಯಕರನ್ನು ಧಮನಿಸುವ ಕೆಲಸ ನಡೆಯುತ್ತಿದ್ದು. ಸಂವಿಧಾನಕ್ಕೆ ಆಶಯಕ್ಕೆ ವಿರೋಧವಾಗಿದ್ದು ಇದನ್ನು ಬಲವಾಗಿ ಖಂಡಿಸುತ್ತೇವೆ. ತಕ್ಷಣ ಅವರ ಮೇಲೆ ಹಾಕಿರುವ ಕೇಸನ್ನು ಮತ್ತು ನಿರ್ಬಂಧ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸುತ್ತೇವೆ ಎಂದು ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಆಗ್ರಹಿಸಿದರು.

Related posts

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ದ.ಕ. ಜಿಲ್ಲಾ ಬಿ.ಎಂ.ಎಸ್ ವತಿಯಿಂದ ವಿಶ್ವಕರ್ಮ ಜಯಂತಿ ಅಂಗವಾಗಿ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ನಾರಾಯಣ ಪೂಜಾರಿ , ಕೆ.ಶ್ರೀಧರ್ ರಾವ್ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಸ್ಸಾಂ ರಾಜ್ಯದ ಸಂಸದ ಕಾಮಾಖ್ಯ ಪ್ರಸಾದ ತಾಸಾ ಭೇಟಿ

Suddi Udaya

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!