28 C
ಪುತ್ತೂರು, ಬೆಳ್ತಂಗಡಿ
August 5, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ನ ಓಲೈಕೆ ರಾಜಕಾರಣದಿಂದ ಶರಣ್ ಪಂಪುವೆಲ್ ರವರ ಮೇಲೆ ಕೇಸು ಖಂಡನೀಯ : ನವೀನ್ ನೆರಿಯ

ಬೆಳ್ತಂಗಡಿ: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದ ಗೋಹತ್ಯೆ ಪ್ರಕರಣವನ್ನು ಖಂಡಿಸಿ ಮಾಧ್ಯಮದಲ್ಲಿ ನೀಡಿದ ಹೇಳಿಕೆಯ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ. ಹಲವು ವರ್ಷಗಳಿಂದ ಅಕ್ರಮ ಗೋಸಾಗಾಟ, ಗೋಹತ್ಯೆ ಅಲ್ಲದೆ ಗೋಕಳ್ಳತನ ನಡೆಯುತ್ತಿದ್ದು ಕಳ್ಳರನ್ನು ಗೋಹಂತಕರನ್ನು ಬಂಧಿಸಲು ಹಾಗೂ ಗೋಹತ್ಯೆಯನ್ನು ನಿಲ್ಲಿಸಲು ಆಗದ ಸರಕಾರ ಹಾಗೂ ಕಾಂಗ್ರೆಸ್ ಪ್ರೇರಿತ ಅಧಿಕಾರಿಗಳು ಗೋಹತ್ಯೆ ವಿರುದ್ದ ಮಾತಾಡಿದ ಗೋಪ್ರೇಮಿಗಳ ಮೇಲೆ ಕೇಸು ಹಾಕಿರುವುದು ಖಂಡನೀಯ.

ಗೋಹತ್ಯೆ ಲವ್ ಜಿಹಾದ್ ಕಾರಣದಿಂದ ಗಲಭೆಗಳು ನಡೆದು ಜಿಲ್ಲೆ ಪ್ರಕ್ಷುಬ್ದವಾಗಿರುವ ಘಟನೆಗಳು ನಡೆದಿತ್ತು. ಈ ಗೋಮಾಫಿಯಾದ ಹಿಂದೆ ದೊಡ್ಡ ಜಾಲ ಕಾರ್ಯನಿರ್ವಹಿಸುತ್ತಿದ್ದು ಇದರ ಬಗ್ಗೆ ಮಾತನಾಡಿದನ್ನು ಕಾರಣವಾಗಿಟ್ಟುಕೊಂಡು ಕಾಂಗ್ರೆಸ್ಸಿನ ಓಲೈಕೆ ರಾಜಕೀಯಕೋಸ್ಕರ ಶರಣ್ ಪಂಪುವೆಲ್ ರವರ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ. ಇದರಿಂದ ಅಭಿವ್ಯಕ್ತ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಿದೆ. ಅಲ್ಲದೆ ಅವರಿಗೆ ಚಿಕ್ಕಮಗಳೂರು ಜಿಲ್ಲಾ ಪ್ರವೇಶ ನಿರ್ಬಂಧಿಸಿದ್ದಾರೆ ಇದೆಲ್ಲವೂ ಯಾರನ್ನೋ ಓಲೈಕೆ ಮಾಡಲು ಹಿಂದೂ ನಾಯಕರನ್ನು ಧಮನಿಸುವ ಕೆಲಸ ನಡೆಯುತ್ತಿದ್ದು. ಸಂವಿಧಾನಕ್ಕೆ ಆಶಯಕ್ಕೆ ವಿರೋಧವಾಗಿದ್ದು ಇದನ್ನು ಬಲವಾಗಿ ಖಂಡಿಸುತ್ತೇವೆ. ತಕ್ಷಣ ಅವರ ಮೇಲೆ ಹಾಕಿರುವ ಕೇಸನ್ನು ಮತ್ತು ನಿರ್ಬಂಧ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸುತ್ತೇವೆ ಎಂದು ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಆಗ್ರಹಿಸಿದರು.

Related posts

ಉಜಿರೆ ಗ್ರಾ.ಪಂ. ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ನಿಧನ

Suddi Udaya

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya

ಎಸ್.ಡಿ.ಎಂ. ಪಪೂ ಕಾಲೇಜು : ಶೈಕ್ಷಣಿಕ ಅಧ್ಯಯನ ಪ್ರವಾಸ

Suddi Udaya

ಬೆಳ್ತಂಗಡಿಯ ಜನಸ್ನೇಹಿ ಇನ್ಸ್ಪೆಕ್ಟರ್ ಸುಬ್ಬಪುರ ಮಠ ವರ್ಗಾವಣೆ

Suddi Udaya

ಕಾಂಗ್ರೆಸ್ ಪಕ್ಷದ ಬೆಂಬಲಿಗರು ಫೇಸ್ ಬುಕ್‌ನಲ್ಲಿ ನನ್ನ ಬಗ್ಗೆ ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಇದು ನನ್ನ ಸ್ಪರ್ಧೆಯಿಂದ ಅವರಿಗೆ ಹಿನ್ನಡೆಯಾಗುವ ಭಯ: ಜೆಡಿಎಸ್ ಅಭ್ಯರ್ಥಿ ಆಶ್ರಫ್‌ ಆಲಿಕುಂಞಿ

Suddi Udaya

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya
error: Content is protected !!