24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜಕೇಸರಿ ಟ್ರಸ್ಟ್ ನಿಂದ ಸವಣಾಲು ಸ.ಹಿ.ಪ್ರಾ.ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ,ಪೆನ್ ವಿತರಣೆ

ಬೆಳ್ತಂಗಡಿ: ಸರಕಾರಿ ಶಾಲೆಗಳಲ್ಲಿ ಅನೇಕ ಸೌಲಭ್ಯ, ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು ಉತ್ತಮ ಪರಿಸರದ ವಾತಾವರಣ ಇದೆ. ಇದರಿಂದ ಮಕ್ಕಳಿಗೆ ಶಿಕ್ಷಣದ ಜೊತೆ ಉತ್ತಮ ಆರೋಗ್ಯ ಸಿಗಲು ಸಾದ್ಯ. ಕೆಲವೊಂದು ಸೌಲಭ್ಯಗಳ ಕೊರತೆ ಇದ್ದು ಇದನ್ನು ಊರವರು ,ದಾನಿಗಳು ನೀಡಲು ಮುಂದಾಗಬೇಕು .ಇಂದು ರಾಜಕೇಸರಿ ಟ್ರಸ್ಟ್ ಬ್ಯಾಗ್, ಪುಸ್ತಕ, ಇನ್ನಿತರ ಕೊಡುಗೆ ನೀಡಿ ಸರಕಾರಿ ಶಾಲಾ ಮಕ್ಕಳ ಭವಿಷ್ಯ ರೂಪಿಸುತ್ತಿದೆ. ಸರಕಾರಿ ಶಾಲಾ ಸೇವೆ ದೇವರ ಸೇವೆ ಮಾಡಿದಂತೆ ಎಂದು ದಾರ್ಮಿಕ ಮುಖಂಡ ಕಿರಣ್ ಪುಷ್ಪಗಿರಿ ಹೇಳಿದರು.

ಅವರು ಜು.6ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತನಬೈಲು ಸವಣಾಲು ಇಲ್ಲಿನ ಮಕ್ಕಳಿಗೆ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಬ್ಯಾಗ್ ,ಪೆನ್ನು ವಿತರಿಸಿ ಮಾತನಾಡಿ ಹಿಂದೆ ಸರಕಾರಿ ಶಾಲೆಯಲ್ಲಿ ಕಲಿತವರು ಅನೇಕರು ದೊಡ್ಡ ದೊಡ್ಡ ಅಧಿಕಾರಗಳು, ರಾಜಕಾರಣಿಗಳು , ವಿದ್ವಾಂಸರು ರಾಗಿ ಬೆಳೆದಿದ್ದಾರೆ. ಆದ್ದರಿಂದ ಸರಕಾರಿ ಶಾಲೆ ಎಂಬ ಕೀಳರಿಮೆ ಬೇಡ .ಶಾಲೆಯು ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಇದ್ದು ಊರವರು ಸೇರಿ ಮಾದರಿ ಕಾರ್ಯಕ್ರಮ ಮಾಡಬೇಕು ನಾನು ನೆರವನ್ನು ನೀಡಲು ಸಿದ್ದ ಎಂದರು.

ಪತ್ರಕರ್ತ ಮನೋಹರ್ ಬಳಂಜ ಮಾತನಾಡಿ ಸರಕಾರಿ ಶಾಲೆ ಬೆಳವಣಿಗೆ ಪೋಷಕರು, ಹಳೆವಿದ್ಯಾರ್ಥಿಗಳ ಕೊಡುಗೆ ಅಗತ್ಯ. ಪೋಷಕರು ನಿರಂತರ ಶಾಲೆಗೆ ಬೇಟಿ ನೀಡುವ ಮೂಲಕ ಮಕ್ಕಳ ಶಿಕ್ಷಣದ ಕಡೆ ಮತ್ತು ಶಾಲೆಯ ಬೆಳವಣಿಗೆಗೆ ಗಮನ ಹರಿಸಬೇಕು ಎಂದರು.

ಶಾಲಾಭಿವೃದ್ದಿ ಸಮಿತಿ ಅದ್ಯಕ್ಷ ಪ್ರಭಾಕರ್ ಭಟ್ ಅದ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮೀಣ ಭಾಗದ ಶಾಲೆಯನ್ನು ಗುರುತಿಸಿ ರಾಜಕೇಸರಿ ಟ್ರಸ್ಟ್ ನೆರವು ನೀಡಲು ಮುಂದಾಗಿದ್ದು ಮಕ್ಕಳಿಗೆ ಅನುಕೂಲವಾಗಿದೆ. ಇಂತಹ ಸಂಘಟನೆಗಳಿಂದ ಸರಕಾರಿ ಶಾಲೆ ಬೆಳೆಯಲು ಸಾದ್ಯ ಎಂದರು.

ಕಾರ್ಯಕ್ರಮದಲ್ಲಿ ಮೇಲಂತಬೆಟ್ಟು ಗ್ರಾ ಪಂ ಉಪಾಧ್ಯಕ್ಷ ಲೋಕನಾಥ್ ಶೆಟ್ಡಿ, ರಾಜಕೇಸರಿ ಟ್ರಸ್ಟ್ ನ ಸ್ಥಾಪಕಾದ್ಯಕ್ಷ ದೀಪಕ್ ಜಿ, ತಾಲೂಕು ಅದ್ಯಕ್ಷ ಸತೀಶ್ ಕಂಗಿತ್ತಿಲ್, ಗೌರಾವದ್ಯಕ್ಷರಾದ ಸಂದೀಪ್ ಬೆಳ್ತಂಗಡಿ , ಪ್ರೇಮ್ ರಾಜ್ ಲಾಯಿಲ,ಪದಾದಿಕಾರಿಗಳಾದ ಜಗದೀಶ್ ಲಾಯಿಲ, ಶರತ್ ಕರಾಯ,ದೇವರಾಜ್ ಪೂಜಾರಿ, ವಿನೋದ್ ಲಾಯಿಲ ಉಪಸ್ಥಿತರಿದ್ದರು. ಪ್ರಭಾರ ಮುಖ್ಯೋಪಾಧ್ಯಾಯಿನಿ ನಮಿತಾ ಆರ್ ಸ್ವಾಗತಿಸಿ ಸಹಶಿಕ್ಷಕ ವಸಂತ ಗುಡಿಗಾರ್ ವಂದಿಸಿದರು. ಸಹಶಿಕ್ಷಕಿ ಶ್ಯಾಮಲಾ ಕೆ ನಿರೂಪಿಸಿದರು.49 ಮಕ್ಕಳಿಗೆ ಉಚಿತ ಬ್ಯಾಗ್ ,ಪೆನ್ ಕಿಟ್ ವಿತರಿಸಲಾಯಿತು

Related posts

ಬೆನಕ  ಹೆಲ್ತ್ ಸೆಂಟರ್ ನ ಔಷಧಾಲಯ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya

ಬೆಳಾಲು: ನೋಣಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ: ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಶುಭಾರಂಭ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಅರ್ಹ ಫಲಾನುಭವಿಗಳಿಗೆ ನೀರಿನ ಡ್ರಮ್ ವಿತರಣೆ

Suddi Udaya

ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರು

Suddi Udaya
error: Content is protected !!