27 C
ಪುತ್ತೂರು, ಬೆಳ್ತಂಗಡಿ
June 21, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಎಸ್‌ಡಿಪಿಐ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಧರ್ಮಸ್ಥಳ ಠಾಣೆಗೆ ದೂರು

ಬೆಳ್ತಂಗಡಿ : ಸಾಮಾಜಿಕ ಜಾಲತಾಣವಾದ ವಾಟ್ಸಪ್ಪ್ ನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವಿರುದ್ಧ ಅವಹೇಳನಕಾರಿ ಪೋಸ್ಟ್/ ಬರಹ ವಿರುದ್ಧ ಬೆಳ್ತಂಗಡಿ ವಿಧಾನಸಭಾ ಕ್ಷೇತಧ್ಯಕ್ಷ ಅಕ್ಬರ್ ಬೆಳ್ತಂಗಡಿ ಅವರ ನಿಯೋಗದಿಂದ ಧರ್ಮಸ್ಥಳ ಠಾಣೆಗೆ ದೂರು ನೀಡಲಾಯಿತು.

ಚಾರ್ಮಾಡಿಯ MIDLEST CHARMADY ಎಂಬ ವಾಟ್ಸಪ್ ಗ್ರೂಪ್‌ನಲ್ಲಿ ಮಹಮ್ಮದ್ ಮುನೀರ್ ಮತ್ತು ನೌಫಲ್ ಎಂಬ ಯುವಕರು ನಿರಂತರ ಪಕ್ಷ ಹಾಗೂ ನಾಯಕರ ವಿರುದ್ಧ ಇಲ್ಲ ಸಲ್ಲದ ಅವಹೇಳನಕಾರಿ ದ್ವೇಷ ಹುಟ್ಟಿಸುವಂತಹ ಸಂದೇಶ ರವಾನೆ ಮಾಡುತ್ತಿದ್ದು, ರವಾನಿಸಿದಂತಹ ಸಂದೇಶಗಳು ಸತ್ಯಕ್ಕೆ ದೂರವಾದ್ದು ಎಂದು ದೂರಿನಲ್ಲಿ ಉಲ್ಲೆಖಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಸಂದೇಶದಿಂದ ಸಮಾಜದಲ್ಲಿ ಆಶಾಂತಿ ಉಂಟಾಗಿ ಗಲಭೆಗೆ ಪಿತೂರಿ ನಡೆಸುವ ಹುನ್ನಾರದಿಂದ ಸಂದೇಶ ರಚನೆ ಮತ್ತು ಹರಡುವಿಕೆಗೆ ಹೊಣೆಗಾರರಾಗಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಉಜಿರೆ ಬ್ಲಾಕ್ ಅಧ್ಯಕ್ಷರಾದ ಮಹಮ್ಮದ್ ಅಲಿ, ಕ್ಷೇತ್ರ ಸಮಿತಿ ಸದಸ್ಯರಾದ ಅಶ್ರಫ್ ಕಟ್ಟೆ, ಮುಖಂಡರಾದ ಅಶ್ರಫ್ ಚಾರ್ಮಾಡಿ, ಸಿದ್ದಿಕ್ ಚಾರ್ಮಾಡಿ, ಮನ್ಸೂರ್ ಚಾರ್ಮಾಡಿ, ಬ್ರಾಂಚ್ ನಾಯಕರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಅಕ್ರಮ ಮರಳು ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

Suddi Udaya

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಮದ್ದಡ್ಕ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆ: ಸಂಬಂಧಪಟ್ಟವರು ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ತೆಕ್ಕಾರು ಪರಿಸರದ ಹಲವು ಮನೆಗಳಲ್ಲಿ ಕಳ್ಳತನ: ಲಕ್ಷಾಂತರ ರೂ. ನಗ-ನಗದು ಕಳವು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya
error: Content is protected !!