25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 14 ರಿಂದ 21ರ ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ 27ನೇ ವರ್ಷದ ಭಜನಾ ಕಮ್ಮಟವನ್ನು ಆಯೋಜಿಸಲಾಗಿದೆ ಎಂದು ಭಜನಾ ಕಮ್ಮಟದ ಸಂಚಾಲಕರಾದ ಟಿ. ಸುಬ್ರಹ್ಮಣ್ಯ ಪ್ರಸಾದ್ ಮತ್ತು ಕಾರ್ಯದರ್ಶಿಗಳಾದ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

ಸೆಪ್ಟೆಂಬರ್ 14 ರಂದು ಆರಂಭಗೊಂಡು 21 ರಂದು ಭಜನೋತ್ಸವದೊಂದಿಗೆ ಸಮಾಪನಗೊಳ್ಳಲಿದೆ.
ಭಜನೆಯಲ್ಲಿ ರಾಗ, ತಾಳ, ಲಯದ ಜ್ಞಾನವಿದ್ದು, 18 ವರ್ಷ ಪ್ರಾಯದಿಂದ 45 ವರ್ಷ ಪ್ರಾಯದ ಒಳಗಿನವರಿಗೆ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ. ಇದುವರೆಗೆ ಇಲ್ಲಿನ ಭಜನಾ ಕಮ್ಮಟದಲ್ಲಿ ಭಾಗವಹಿಸದೆ ಇರುವವರಾಗಿರಬೇಕು. ಒಂದು  ಭಜನಾ ಮಂಡಳಿಯಿಂದ ಇಬ್ಬರಿಗೆ ಮಾತ್ರ ಅವಕಾಶವಿದ್ದು, ತಾವು ಕಲಿತು ಇನ್ನೊಬ್ಬರಿಗೆ ಕಲಿಸಿಕೊಡುವವರಾಗಿರಬೇಕು. ಆಸಕ್ತರು ಸಂಬಂಧಪಟ್ಟವರನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 9632064164, 9663464648, 8147263422, 08256-266644

ಆಸಕ್ತರು ಆಗೋಸ್ತು 31ರ ಒಳಗೆ ಹೆಸರು ನೋಂದಾಯಿಸಬೇಕು.

Related posts

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಉಜಿರೆ ಹಳೇಪೇಟೆ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ ಅವಿರೋಧವಾಗಿ ಆಯ್ಕೆ

Suddi Udaya

ಎಸ್ ಡಿ ಎಂ ಶಿಕ್ಷಣ ಸಂಸ್ಥೆಯಿಂದ ರೂ. 2.50 ಕೋಟಿ ವಿದ್ಯಾರ್ಥಿವೇತನ ವಿತರಣೆ

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya
error: Content is protected !!