May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 14 ರಿಂದ 21ರ ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ 27ನೇ ವರ್ಷದ ಭಜನಾ ಕಮ್ಮಟವನ್ನು ಆಯೋಜಿಸಲಾಗಿದೆ ಎಂದು ಭಜನಾ ಕಮ್ಮಟದ ಸಂಚಾಲಕರಾದ ಟಿ. ಸುಬ್ರಹ್ಮಣ್ಯ ಪ್ರಸಾದ್ ಮತ್ತು ಕಾರ್ಯದರ್ಶಿಗಳಾದ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

ಸೆಪ್ಟೆಂಬರ್ 14 ರಂದು ಆರಂಭಗೊಂಡು 21 ರಂದು ಭಜನೋತ್ಸವದೊಂದಿಗೆ ಸಮಾಪನಗೊಳ್ಳಲಿದೆ.
ಭಜನೆಯಲ್ಲಿ ರಾಗ, ತಾಳ, ಲಯದ ಜ್ಞಾನವಿದ್ದು, 18 ವರ್ಷ ಪ್ರಾಯದಿಂದ 45 ವರ್ಷ ಪ್ರಾಯದ ಒಳಗಿನವರಿಗೆ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ. ಇದುವರೆಗೆ ಇಲ್ಲಿನ ಭಜನಾ ಕಮ್ಮಟದಲ್ಲಿ ಭಾಗವಹಿಸದೆ ಇರುವವರಾಗಿರಬೇಕು. ಒಂದು  ಭಜನಾ ಮಂಡಳಿಯಿಂದ ಇಬ್ಬರಿಗೆ ಮಾತ್ರ ಅವಕಾಶವಿದ್ದು, ತಾವು ಕಲಿತು ಇನ್ನೊಬ್ಬರಿಗೆ ಕಲಿಸಿಕೊಡುವವರಾಗಿರಬೇಕು. ಆಸಕ್ತರು ಸಂಬಂಧಪಟ್ಟವರನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 9632064164, 9663464648, 8147263422, 08256-266644

ಆಸಕ್ತರು ಆಗೋಸ್ತು 31ರ ಒಳಗೆ ಹೆಸರು ನೋಂದಾಯಿಸಬೇಕು.

Related posts

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya

ಕುಂಟಿನಿ ಎಸ್.ಬಿ.ಎಸ್ ಚುನಾವಣೆ: ಅಧ್ಯಕ್ಷರಾಗಿ ಮುಹಮ್ಮದ್ ಉವೈಸ್ ಆಯ್ಕೆ

Suddi Udaya

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya
error: Content is protected !!