ಬೆಳ್ತಂಗಡಿ; ಉಜಿರೆ ಎಸ್.ಡಿ.ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆಯು ಜು. 5ರಂದು ನಡೆಯಿತು.
ಶಿಕ್ಷಣ ಸಂಸ್ಥೆಗಳ ಶಿಕ್ಷಣ ಸಂಯೋಜಕರಾದ ಎಸ್.ಎನ್ ಕಾಕತ್ಕರ್ ದೀಪ ಬೆಳಗುವ ಮೂಲಕ ಸಂಘಗಳನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,

ಕಲಿಕೆಯ ಜೊತೆಗೆ ಸಹಪಠ್ಯ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು. ಅಲ್ಲದೆ ಕೆಲವು ಸಣ್ಣ ಕುತೂಹಲ ಪ್ರಶ್ನೆಗಳನ್ನು ಕೇಳುವ ಮೂಲಕ ವಿದ್ಯಾರ್ಥಿಗಳಲ್ಲಿ ಆಸಕ್ತಿಯನ್ನು ಹೆಚ್ಚಿಸಿದರು.
ಯಕ್ಷಗಾನ ಪಾತ್ರಧಾರಿಗಳು ಕಿರು ಯಕ್ಷಗಾನ ಪ್ರಹಸನ, ವಿದ್ಯಾರ್ಥಿನಿಯರಿಂದ ನೃತ್ಯ, ಕ್ರೀಡಾಪಟುಗಳಿಗಾಗಿ ಹೊಸ ಅಂಕಣ ಉದ್ಘಾಟನೆ ಮೂಲಕ ಶೈಕ್ಷಣಿಕ ವರ್ಷದ ಸಾಂಘಿಕ ಕಾರ್ಯಕ್ರಮಗಳನ್ನು ಆರಂಭಿಸಲಾಯಿತು. ಶಾಲೆಯ ಮುಖ್ಯಸ್ಥ ಬಾಲಕೃಷ್ಣ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಯಕ್ಷಗಾನ ತರಬೇತುದಾರ ಲಕ್ಷ್ಮಣ ಗೌಡ, ನೃತ್ಯ ತರಬೇತಿಯನ್ನು ನೀಡಲಿರುವ ಚೈತ್ರಾ ಇವರುಗಳು ಭಾಗವಹಿಸಿದ್ದರು.
ಶಿಕ್ಷಕ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಶಿಕ್ಷಕ ಕೂಸಪ್ಪ ಗೌಡ ಇವರು ಅತಿಥಿಗಳಿಗೆ ಸ್ವಾಗತ ನೀಡಿದರೆ ಶಿಕ್ಷಕಿ ಸುಜಾತ ಧನ್ಯವಾದ ಅರ್ಪಿಸಿದರು. ಶಿಕ್ಷಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.












