28.6 C
ಪುತ್ತೂರು, ಬೆಳ್ತಂಗಡಿ
September 19, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಎಸ್‌ಡಿಪಿಐ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಧರ್ಮಸ್ಥಳ ಠಾಣೆಗೆ ದೂರು

ಬೆಳ್ತಂಗಡಿ : ಸಾಮಾಜಿಕ ಜಾಲತಾಣವಾದ ವಾಟ್ಸಪ್ಪ್ ನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವಿರುದ್ಧ ಅವಹೇಳನಕಾರಿ ಪೋಸ್ಟ್/ ಬರಹ ವಿರುದ್ಧ ಬೆಳ್ತಂಗಡಿ ವಿಧಾನಸಭಾ ಕ್ಷೇತಧ್ಯಕ್ಷ ಅಕ್ಬರ್ ಬೆಳ್ತಂಗಡಿ ಅವರ ನಿಯೋಗದಿಂದ ಧರ್ಮಸ್ಥಳ ಠಾಣೆಗೆ ದೂರು ನೀಡಲಾಯಿತು.

ಚಾರ್ಮಾಡಿಯ MIDLEST CHARMADY ಎಂಬ ವಾಟ್ಸಪ್ ಗ್ರೂಪ್‌ನಲ್ಲಿ ಮಹಮ್ಮದ್ ಮುನೀರ್ ಮತ್ತು ನೌಫಲ್ ಎಂಬ ಯುವಕರು ನಿರಂತರ ಪಕ್ಷ ಹಾಗೂ ನಾಯಕರ ವಿರುದ್ಧ ಇಲ್ಲ ಸಲ್ಲದ ಅವಹೇಳನಕಾರಿ ದ್ವೇಷ ಹುಟ್ಟಿಸುವಂತಹ ಸಂದೇಶ ರವಾನೆ ಮಾಡುತ್ತಿದ್ದು, ರವಾನಿಸಿದಂತಹ ಸಂದೇಶಗಳು ಸತ್ಯಕ್ಕೆ ದೂರವಾದ್ದು ಎಂದು ದೂರಿನಲ್ಲಿ ಉಲ್ಲೆಖಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಸಂದೇಶದಿಂದ ಸಮಾಜದಲ್ಲಿ ಆಶಾಂತಿ ಉಂಟಾಗಿ ಗಲಭೆಗೆ ಪಿತೂರಿ ನಡೆಸುವ ಹುನ್ನಾರದಿಂದ ಸಂದೇಶ ರಚನೆ ಮತ್ತು ಹರಡುವಿಕೆಗೆ ಹೊಣೆಗಾರರಾಗಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಉಜಿರೆ ಬ್ಲಾಕ್ ಅಧ್ಯಕ್ಷರಾದ ಮಹಮ್ಮದ್ ಅಲಿ, ಕ್ಷೇತ್ರ ಸಮಿತಿ ಸದಸ್ಯರಾದ ಅಶ್ರಫ್ ಕಟ್ಟೆ, ಮುಖಂಡರಾದ ಅಶ್ರಫ್ ಚಾರ್ಮಾಡಿ, ಸಿದ್ದಿಕ್ ಚಾರ್ಮಾಡಿ, ಮನ್ಸೂರ್ ಚಾರ್ಮಾಡಿ, ಬ್ರಾಂಚ್ ನಾಯಕರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ ಟ್ರಸ್ಟ್ ಸಿಡ್ಬಿ ಪ್ರಯಾಸ ಸ್ವ ಉದ್ಯೋಗ ಕ್ಕೆ 1ಕೋಟಿ ಪ್ರಗತಿ ನಿಧಿ ಮಜೂರಾತಿ ವಿತರಣೆ

Suddi Udaya

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

Suddi Udaya

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya

ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು

Suddi Udaya
error: Content is protected !!