ನೆಲ್ಯಾಡಿ ಎಂಜಿರ ಸಮೀಪ ಲಾವತಡ್ಕ ಎಂಬಲ್ಲಿ ಕಾರು ಪಲ್ಟಿಯಾಗಿ 6 ಜನರಿಗೆ ಗಂಭೀರ ಗಾಯವಾದ ಘಟನೆ ಜು. 6ರಂದು ರಾತ್ರಿ ನಡೆದಿದೆ.

ಸಕಲೇಶಪುರ ಮೂಲದ ಕಾರು ಉಜಿರೆ ಕಡೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿನ ತಿರುವು ಈ ಅಪಘಾತಕ್ಕೆ ಕಾರಣ ಎಂದು ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದರು.













