24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 14 ರಿಂದ 21ರ ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ 27ನೇ ವರ್ಷದ ಭಜನಾ ಕಮ್ಮಟವನ್ನು ಆಯೋಜಿಸಲಾಗಿದೆ ಎಂದು ಭಜನಾ ಕಮ್ಮಟದ ಸಂಚಾಲಕರಾದ ಟಿ. ಸುಬ್ರಹ್ಮಣ್ಯ ಪ್ರಸಾದ್ ಮತ್ತು ಕಾರ್ಯದರ್ಶಿಗಳಾದ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

ಸೆಪ್ಟೆಂಬರ್ 14 ರಂದು ಆರಂಭಗೊಂಡು 21 ರಂದು ಭಜನೋತ್ಸವದೊಂದಿಗೆ ಸಮಾಪನಗೊಳ್ಳಲಿದೆ.
ಭಜನೆಯಲ್ಲಿ ರಾಗ, ತಾಳ, ಲಯದ ಜ್ಞಾನವಿದ್ದು, 18 ವರ್ಷ ಪ್ರಾಯದಿಂದ 45 ವರ್ಷ ಪ್ರಾಯದ ಒಳಗಿನವರಿಗೆ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ. ಇದುವರೆಗೆ ಇಲ್ಲಿನ ಭಜನಾ ಕಮ್ಮಟದಲ್ಲಿ ಭಾಗವಹಿಸದೆ ಇರುವವರಾಗಿರಬೇಕು. ಒಂದು  ಭಜನಾ ಮಂಡಳಿಯಿಂದ ಇಬ್ಬರಿಗೆ ಮಾತ್ರ ಅವಕಾಶವಿದ್ದು, ತಾವು ಕಲಿತು ಇನ್ನೊಬ್ಬರಿಗೆ ಕಲಿಸಿಕೊಡುವವರಾಗಿರಬೇಕು. ಆಸಕ್ತರು ಸಂಬಂಧಪಟ್ಟವರನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 9632064164, 9663464648, 8147263422, 08256-266644

ಆಸಕ್ತರು ಆಗೋಸ್ತು 31ರ ಒಳಗೆ ಹೆಸರು ನೋಂದಾಯಿಸಬೇಕು.

Related posts

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜರಿಗೆ ಸ್ವಾಮೀಜಿಯವರಿಂದ ಆಶೀರ್ವಾದ:

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಮನೆಗೊಂದು ಗ್ರಂಥಾಲಯ ಕರಪತ್ರ ಬಿಡುಗಡೆ

Suddi Udaya

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಮಹೋತ್ಸವ ಕ್ರೀಡಾ ಸಂಭ್ರಮ

Suddi Udaya

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!