July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಿಮಣೇಲು : ಮರೋಡಿ ಬೆಳ್ಳಿಬೀಡು ಬಸದಿಯ ಅನುವಂಶಿಕ ಆಡಳಿತ ಮೊಕೇಸ್ತರ ಕೆ. ಹೇಮರಾಜ್ ರವರಿಂದ ತಿಮ್ಮಣಬೆಟ್ಟು ಸ.ಉ.ಹಿ.ಪ್ರಾ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ವೇಣೂರು: ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳು ನಿಜವಾಗಿಯೂ ಸಂಸ್ಕಾರಯುತ ಶಿಕ್ಷಣವನ್ನು ನೀಡುವ ಕೇಂದ್ರಗಳಾಗಿವೆ ಇಂತಹ ಶಾಲೆಗಳ ವಿದ್ಯಾರ್ಥಿಗಳನ್ನು ಹಾಗೂ ಅವರಲ್ಲಿರುವ ಪ್ರತಿಭೆಗಳನ್ನು ಗುರುತಿಸಲು ಸಮಾಜದ ಸರ್ವರ ಪ್ರೋತ್ಸಾಹ ಅಗತ್ಯವಿದೆ. ಶಾಲಾ ಎಸ್.ಡಿ.ಎಂ.ಸಿ, ಮುಖ್ಯಶಿಕ್ಷಕರು ಮತ್ತು ಶಿಕ್ಷಕ ವೃಂದ ಹಾಗೂ ಪೋಷಕರು ಸಹಕಾರವಿದ್ದಾಗ ಮಾತ್ರ ಗ್ರಾಮೀಣ ಪ್ರದೇಶಗಳ ಶಾಲೆಗಳ ಉನ್ನತಿ ಸಾಧ್ಯ ಎಂದು ಮರೋಡಿ ಬೆಳ್ಳಿಬೀಡು ಬಸದಿಯ ಅನುವಂಶಿಕ ಆಡಳಿತ ಮೊಕೇಸ್ತರ ಹಾಗೂ ಮೂಡುಬಿದಿರೆ ಶ್ರೀ ದಿಗಂಬರ ಜೈನ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಹೇಮರಾಜ್ ಬೆಳ್ಳಿಬೀಡು
ಹೇಳಿದರು.

ಅವರು ಕರಿಮಣೇಲು ಗ್ರಾಮದ ತಿಮ್ಮಣಬೆಟ್ಟು ಸರಕಾರಿ ಉ.ಹಿ.ಪ್ರಾ ಶಾಲಾ ಮಕ್ಕಳಿಗೆ ತಮ್ಮ ವೈಯಕ್ತಿಕ ನಿಧಿಯಿಂದ ಒಂದರಿಂದ ಏಳನೇ ತರಗತಿವರೆಗಿನ ಮಕ್ಕಳಿಗೆ ಇಡೀ ಶೈಕ್ಷಣಿಕ ವರ್ಷಕ್ಕೆ ಅಗತ್ಯವಿರುವ ನೋಟ್ ಪುಸ್ತಕಗಳನ್ನು ಮತ್ತು ಇತರ ಪರಿಕರಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದರು. ಕಾರ್ಯಕ್ರಮವನ್ನು ದೀಪಪ್ರಜ್ವಲಿಸಿ ಉದ್ಘಾಟಿಸಿದರು.


ಮುಖ್ಯ ಅತಿಥಿಗಳಾಗಿ ಮೂಡುಬಿದಿರೆ ಜೈನ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ಮೂಡುಕೋಡಿ ಭಾಗವಹಿಸಿ ಶುಭಹಾರೈಸಿದರು. ವೇದಿಕೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ ಹಾಗೂ ಗ್ರಾಮ ಪಂಚಾಯತ್ ಸದಸ್ಯೆ ಸುಮ, ಮರಾಠಿ ಸೇವಾ ಸಂಘದ ಅಧ್ಯಕ್ಷ ವಿಠಲ ನಾಯ್ಕ, ಮಾಜಿ ಅಧ್ಯಕ್ಷ ಲಕ್ಷ್ಮಣ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.


ಶಾಲಾ ಮುಖ್ಯ ಶಿಕ್ಷಕ ಸಚಿನ್ ಬೇಗೂರ್ ಸ್ವಾಗತಿಸಿ, ಶಾಲಾ ಶಿಕ್ಷಕಿ ಗಾಯತ್ರಿ ಪ್ರಶಾಂತ್ ಅತಿಥಿಗಳಾದ ಕೆ. ಹೇಮರಾಜ್ ರವರನ್ನು ಸಭೆಗೆ ಪರಿಚಯಿಸಿದರು. ಶಿಕ್ಷಕಿ ಕವಿತಾ ಕಾರ್ಯಕ್ರಮ ನಿರೂಪಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ರಾಜುನಾಯ್ಕ ವಂದಿಸಿದರು.

Related posts

ಕಾಜೂರು ಉರೂಸ್ ಗೆ ಅದ್ದೂರಿ ಚಾಲನೆ

Suddi Udaya

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

Suddi Udaya

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!