July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಎಸ್.ಎಸ್.ಎಫ್. ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

ಗುರುವಾಯನಕೆರೆ : ಸಕ್ರೀಯತೆಗೆ ಮನಸ್ಸುಗಳನ್ನು ಪೋಣಿಸುವ ಎಂಬ ಧ್ಯೇಯ ವಾಕ್ಯದೊಂದಿಗೆ ಎಸ್.ಎಸ್.ಎಫ್. ಬೆಳ್ತಂಗಡಿ ಡಿವಿಷನ್ ಸಮಿತಿಯು ಹಮ್ಮಿಕೊಂಡಿದ್ದ ಸೆಕ್ಟರ್ ಸಂಚಾರ ಕಾರ್ಯಕ್ರಮವು ಎಸ್.ಎಸ್.ಎಫ್. ಗುರುವಾಯನಕೆರೆ ಸೆಕ್ಟರ್ ವ್ಯಾಪ್ತಿಯಲ್ಲಿ ಜು.6ರಂದು ಮದ್ದಡ್ಕ ಸುನ್ನೀ ಸೆಂಟರ್ ಕಛೇರಿಯಲ್ಲಿ ನಡೆಯಿತು.

ಸಯ್ಯದ್ ಶರಫುದ್ದೀನ್ ಅಲ್ ಹಾದಿ ತಂಙಳ್ ದುವಾ ನೇತೃತ್ವ ನೀಡಿದರು. ಕಾರ್ಯಕ್ರಮವನ್ನು ಎನ್.ಎಸ್ ಉಮರ್ ಮಾಸ್ಟರ್ ಮದ್ದಡ್ಕ ಉದ್ಘಾಟಿಸಿದರು. ಡಿವಿಷನ್ ಅಧ್ಯಕ್ಷ ಇಸಾಕ್ ಅಳದಂಗಡಿಯವರು ಉಪಸ್ಥಿತರಿದ್ದರು.

ಪ್ರಾಸ್ತಾವಿಕ ಭಾಷಣ ಅಬ್ಬೋನಾಕ ಮದ್ದಡ್ಕ ಮಾಡಿದರು. ಡಿವಿಷನ್ ಮಿಡಿಯಾ ಕಾರ್ಯದರ್ಶಿಯಾದ ಹಾಫಿಲ್ ಅಬ್ದುಲ್ ಬಾಸಿತ್ ಹಿಮಮಿ ಸಖಾಫಿ ತರಗತಿ ಮಂಡನೆ ಮಾಡಿದರು ರಾಜ್ಯ WEFI ಕಾರ್ಯದರ್ಶಿಯಾದ ರಶೀದ್ ಮಡಂತ್ಯಾರ್ ಹಾಗೂ ಡಿವಿಷನ್ ಕಾರ್ಯದರ್ಶಿ ನಾಸೀರ್ ಪಡ್ಡಂದಡ್ಕ ಸೆಕ್ಟರ್ ಹಾಗೂ ಯುನಿಟ್ ಬಗ್ಗೆ ಅವಲೋಕನ ನಡೆಸಿದರು. ಎಸ್.ಎಸ್.ಎಫ್. ಬೆಳ್ತಂಗಡಿ ಡಿವಿಷನ್ ನಾಯಕರು ಕೆ.ಎಮ್.ಜೆ ಮತ್ತುಎಸ್.ವೈಎಸ್ ಗುರುವಾಯನಕೆರೆ ಸರ್ಕಲ್ ನಾಯಕರು, ಸೆಕ್ಟರ್ ವ್ಯಾಪ್ತಿಯ ಎಸ್.ಎಸ್.ಎಫ್ ಯೂನಿಟ್ ಕ್ಯಾಬಿನೆಟ್ ಸದಸ್ಯರು ಉಪಸ್ಥಿತರಿದ್ದರು.


ಸೆಕ್ಟರ್ ಕಾರ್ಯದರ್ಶಿಗಳಾದ ಇರ್ಷಾದ್ ಹಂದಾನಿ ಸ್ವಾಗತಿಸಿದರು. ಸೆಕ್ಟರ್ ಉಪಾಧ್ಯಕ್ಷ ಮಸೂದ್ ಸಖಾಫಿ ಧನ್ಯವಾದವಿತ್ತರು.

Related posts

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಧರ್ಮಸ್ಥಳ: ಮುಳಿಕ್ಕಾರ್ ಭಾರಿ ಗಾಳಿ ಮಳೆಗೆ ಹಾನಿಯಾದ ಮನೆಗೆ ಧರ್ಮಸ್ಥಳ ಗ್ರಾ.ಪಂ. ನಿಂದ ಆರ್ಥಿಕ ನೆರವು

Suddi Udaya

ಕಲ್ಮಂಜ ಬ್ರಹ್ಮಶ್ರೀ ಯುವ ಬಿಲ್ಲವ ವೇದಿಕೆಯ ಮಾಸಿಕ ಸಭೆ

Suddi Udaya

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

Suddi Udaya
error: Content is protected !!