ಗುರುವಾಯನಕೆರೆ : ಸಕ್ರೀಯತೆಗೆ ಮನಸ್ಸುಗಳನ್ನು ಪೋಣಿಸುವ ಎಂಬ ಧ್ಯೇಯ ವಾಕ್ಯದೊಂದಿಗೆ ಎಸ್.ಎಸ್.ಎಫ್. ಬೆಳ್ತಂಗಡಿ ಡಿವಿಷನ್ ಸಮಿತಿಯು ಹಮ್ಮಿಕೊಂಡಿದ್ದ ಸೆಕ್ಟರ್ ಸಂಚಾರ ಕಾರ್ಯಕ್ರಮವು ಎಸ್.ಎಸ್.ಎಫ್. ಗುರುವಾಯನಕೆರೆ ಸೆಕ್ಟರ್ ವ್ಯಾಪ್ತಿಯಲ್ಲಿ ಜು.6ರಂದು ಮದ್ದಡ್ಕ ಸುನ್ನೀ ಸೆಂಟರ್ ಕಛೇರಿಯಲ್ಲಿ ನಡೆಯಿತು.
ಸಯ್ಯದ್ ಶರಫುದ್ದೀನ್ ಅಲ್ ಹಾದಿ ತಂಙಳ್ ದುವಾ ನೇತೃತ್ವ ನೀಡಿದರು. ಕಾರ್ಯಕ್ರಮವನ್ನು ಎನ್.ಎಸ್ ಉಮರ್ ಮಾಸ್ಟರ್ ಮದ್ದಡ್ಕ ಉದ್ಘಾಟಿಸಿದರು. ಡಿವಿಷನ್ ಅಧ್ಯಕ್ಷ ಇಸಾಕ್ ಅಳದಂಗಡಿಯವರು ಉಪಸ್ಥಿತರಿದ್ದರು.
ಪ್ರಾಸ್ತಾವಿಕ ಭಾಷಣ ಅಬ್ಬೋನಾಕ ಮದ್ದಡ್ಕ ಮಾಡಿದರು. ಡಿವಿಷನ್ ಮಿಡಿಯಾ ಕಾರ್ಯದರ್ಶಿಯಾದ ಹಾಫಿಲ್ ಅಬ್ದುಲ್ ಬಾಸಿತ್ ಹಿಮಮಿ ಸಖಾಫಿ ತರಗತಿ ಮಂಡನೆ ಮಾಡಿದರು ರಾಜ್ಯ WEFI ಕಾರ್ಯದರ್ಶಿಯಾದ ರಶೀದ್ ಮಡಂತ್ಯಾರ್ ಹಾಗೂ ಡಿವಿಷನ್ ಕಾರ್ಯದರ್ಶಿ ನಾಸೀರ್ ಪಡ್ಡಂದಡ್ಕ ಸೆಕ್ಟರ್ ಹಾಗೂ ಯುನಿಟ್ ಬಗ್ಗೆ ಅವಲೋಕನ ನಡೆಸಿದರು. ಎಸ್.ಎಸ್.ಎಫ್. ಬೆಳ್ತಂಗಡಿ ಡಿವಿಷನ್ ನಾಯಕರು ಕೆ.ಎಮ್.ಜೆ ಮತ್ತುಎಸ್.ವೈಎಸ್ ಗುರುವಾಯನಕೆರೆ ಸರ್ಕಲ್ ನಾಯಕರು, ಸೆಕ್ಟರ್ ವ್ಯಾಪ್ತಿಯ ಎಸ್.ಎಸ್.ಎಫ್ ಯೂನಿಟ್ ಕ್ಯಾಬಿನೆಟ್ ಸದಸ್ಯರು ಉಪಸ್ಥಿತರಿದ್ದರು.
ಸೆಕ್ಟರ್ ಕಾರ್ಯದರ್ಶಿಗಳಾದ ಇರ್ಷಾದ್ ಹಂದಾನಿ ಸ್ವಾಗತಿಸಿದರು. ಸೆಕ್ಟರ್ ಉಪಾಧ್ಯಕ್ಷ ಮಸೂದ್ ಸಖಾಫಿ ಧನ್ಯವಾದವಿತ್ತರು.











