July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಕಣಿಯೂರು ಗ್ರಾಮ ಪಂಚಾಯತ್ ನ ದೈನಂದಿನ ಆಡಳಿತ ಕಾರ್ಯಗಳಿಗೆ ಅನುಕೂಲವಾಗುವ ಕಂಪ್ಯೂಟರ್ ಕೊಠಡಿ ಯು ಮಳೆಗಾಲದಲ್ಲಿ ನೀರು ಸುರಿದು ತೊಂದರೆಯಾಗುತ್ತಿದ್ದು, ಮತ್ತು ಫೈಲ್ ಗಳು ಮಳೆಗೆ ಒದ್ದೆಯಾಗುವ ಸಾಧ್ಯತೆಯನ್ನು ಅರಿತು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಬಹುಮತ ದ ನಿರ್ಣಯ ದ ಮೇರೆಗೆ ಗ್ರಾಮ ಪಂಚಾಯತ್ ಕಟ್ಟಡದ ನವೀಕರಣ ಕಾರ್ಯ ಆರಂಭವಾಗಿತ್ತು. ಆದರೆ ಆರಂಭವಾದ ಕೆಲ ದಿನಗಳ ಬಳಿಕ ಕಣಿಯೂರು ಗ್ರಾಮದ ಸತೀಶ್ ರಾವ್ ಎಂಬವರು ತಾಲೂಕು ಪಂಚಾಯತ್ ಆಡಳಿತ ಅಧಿಕಾರಿಯವರ ಮುಂದೆ ಅರ್ಜಿ ಸಲ್ಲಿಸಿ ಕಣಿಯೂರು ಗ್ರಾಮ ಪಂಚಾಯತ್ ನವೀಕರಣಕ್ಕೆ ಕೈಗೊಂಡ ನಿರ್ಣಯ ಕಾನೂನು ಬಾಹಿರವಾಗಿದ್ದು ನಿರ್ಣಯ ವಜಾಗೊಳಿಸಿ ಕಾಮಗಾರಿಯನ್ನು ತಡೆಹಿಡಿಯಬೇಕೆಂದು ಕೋರಿದ್ದರು.

ಎರಡೂ ಕಡೆಯವರ ವಾದವನ್ನು ಆಲಿಸಿದ ಆಡಳಿತಾಧಿಕಾರಿಯವರು ಕಣಿಯೂರು ಗ್ರಾಮ ಪಂಚಾಯತ್ ಕೈಗೊಂಡ ನಿರ್ಣಯ ಕಾನೂನು ಪ್ರಕಾರ ಆಗಿದೆ ಎಂದು ಅಭಿಪ್ರಾಯಪಟ್ಟು ಸತೀಶ್ ರಾವ್ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಲಾಗಿದೆ. ಆಡಳಿತಾಧಿಕಾರಿಯವರ ಮೌಖಿಕ ಆದೇಶದನ್ವಯ ತಡೆಹಿಡಿಯಲಾಗಿದ್ದ ನವೀಕರಣ ಕಾಮಗಾರಿ ಸಂಪೂರ್ಣಗೊAಡಿರುತ್ತದೆ.

Related posts

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದಿಂದ ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ

Suddi Udaya

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya

ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya
error: Content is protected !!