23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಕಣಿಯೂರು ಗ್ರಾಮ ಪಂಚಾಯತ್ ನ ದೈನಂದಿನ ಆಡಳಿತ ಕಾರ್ಯಗಳಿಗೆ ಅನುಕೂಲವಾಗುವ ಕಂಪ್ಯೂಟರ್ ಕೊಠಡಿ ಯು ಮಳೆಗಾಲದಲ್ಲಿ ನೀರು ಸುರಿದು ತೊಂದರೆಯಾಗುತ್ತಿದ್ದು, ಮತ್ತು ಫೈಲ್ ಗಳು ಮಳೆಗೆ ಒದ್ದೆಯಾಗುವ ಸಾಧ್ಯತೆಯನ್ನು ಅರಿತು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಬಹುಮತ ದ ನಿರ್ಣಯ ದ ಮೇರೆಗೆ ಗ್ರಾಮ ಪಂಚಾಯತ್ ಕಟ್ಟಡದ ನವೀಕರಣ ಕಾರ್ಯ ಆರಂಭವಾಗಿತ್ತು. ಆದರೆ ಆರಂಭವಾದ ಕೆಲ ದಿನಗಳ ಬಳಿಕ ಕಣಿಯೂರು ಗ್ರಾಮದ ಸತೀಶ್ ರಾವ್ ಎಂಬವರು ತಾಲೂಕು ಪಂಚಾಯತ್ ಆಡಳಿತ ಅಧಿಕಾರಿಯವರ ಮುಂದೆ ಅರ್ಜಿ ಸಲ್ಲಿಸಿ ಕಣಿಯೂರು ಗ್ರಾಮ ಪಂಚಾಯತ್ ನವೀಕರಣಕ್ಕೆ ಕೈಗೊಂಡ ನಿರ್ಣಯ ಕಾನೂನು ಬಾಹಿರವಾಗಿದ್ದು ನಿರ್ಣಯ ವಜಾಗೊಳಿಸಿ ಕಾಮಗಾರಿಯನ್ನು ತಡೆಹಿಡಿಯಬೇಕೆಂದು ಕೋರಿದ್ದರು.

ಎರಡೂ ಕಡೆಯವರ ವಾದವನ್ನು ಆಲಿಸಿದ ಆಡಳಿತಾಧಿಕಾರಿಯವರು ಕಣಿಯೂರು ಗ್ರಾಮ ಪಂಚಾಯತ್ ಕೈಗೊಂಡ ನಿರ್ಣಯ ಕಾನೂನು ಪ್ರಕಾರ ಆಗಿದೆ ಎಂದು ಅಭಿಪ್ರಾಯಪಟ್ಟು ಸತೀಶ್ ರಾವ್ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಲಾಗಿದೆ. ಆಡಳಿತಾಧಿಕಾರಿಯವರ ಮೌಖಿಕ ಆದೇಶದನ್ವಯ ತಡೆಹಿಡಿಯಲಾಗಿದ್ದ ನವೀಕರಣ ಕಾಮಗಾರಿ ಸಂಪೂರ್ಣಗೊAಡಿರುತ್ತದೆ.

Related posts

ಡಿ.27: ಗುರುವಾಯನಕೆರೆ 37 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ: ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಸರಕಾರಿ ಶಾಲೆಗಳನ್ನು ಮಾದರಿಯಾಗಿಸಲು ಬದುಕು ಕಟ್ಟೋಣ ಬನ್ನಿ ತಂಡ ಪಣ

Suddi Udaya

ರಾಷ್ಟ್ರೀಯ ನ್ಯಾಚುರೋಪಥಿ ಉತ್ಸವದಲ್ಲಿ ಎಸ್.ಡಿ.ಎಂ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!