July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾವೂರು: ನಿoರ್ದಿ ಬಳಿ ರಸ್ತೆಗೆ ಬಿದ್ದ ಮರ ಗ್ರಾ.ಪಂ. ನಿಂದ ತೆರವು ಕಾರ್ಯ

ನಾವೂರು: ನಿನ್ನೆ (ಜು.8)ರಾತ್ರಿ ಸುರಿದ ಭಾರಿ ಮಳೆಗೆ ನಿoರ್ದಿ ರಸ್ತೆ ಬದಿಯ ಮರ ಬೆಳ್ತಂಗಡಿ -ಕಿಲ್ಲೂರು ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ವಿಷಯ ತಿಳಿದ ತಕ್ಷಣ ಗ್ರಾ.ಪಂ. ಮರ ತೆರವು ಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಮಾಜಿ ಅಧ್ಯಕ್ಷರು ಹಾಲಿ ಸದಸ್ಯ ಗಣೇಶ್ ಗೌಡ ನಾವೂರು ಹಾಗೂ ಪಂಚಾಯತ್ ಸದಸ್ಯ ಹಸೈನಾರ್, ಸ್ಥಳೀಯರಾದ ಎ.ಕೆ. ಅಬ್ಬಾಸ್, ಸತೀಶ್ ಸುವರ್ಣ, ಮಾಧವ ಗೌಡ ಒಳಗುಡ್ಡೆ, ಹಮೀದ್ ನಿoರ್ದಿ ರವರು ಮರವನ್ನು ತೇರವುಗೊಳಿಸಲು ಸಹಕರಿಸಿದರು.

ಸಾಲುಗಟ್ಟಿ ನಿಂತ ವಾಹನಗಳನ್ನು ಬದಲಿ ರಸ್ತೆಗಳಾದ ನವಗ್ರಾಮ ಜನತಾ ಕಾಲನಿ ಹಾಗೂ ಪಾಲೇದಬೆಟ್ಟು – ನಾವೂರು ರಸ್ತೆಯಲ್ಲಿ ಕಳಿಸಲಾಯಿತು.ರಸ್ತೆ ಬದಿಯಲ್ಲಿ ಹಲವಾರು ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಗೆ ಈಗಾಗಲೇ ಗ್ರಾ.ಪಂ. ನಿಂದ ಮನವಿ ಮಾಡಿದ್ದು ಮರ ತೆರವುಗೊಳಿಸಲು ಅನುಮತಿ ನೀಡಿರುತ್ತಾರೆ.

ಸಾರ್ವಜನಿಕರಿಗೆ ತೊಂದರೆ ಆಗುವ ಮೊದಲು ಮರ ತೆರವು ಗೊಳಿಸಿ ಮುಂದೆ ನಡೆಯುವ ಅನಾಹುತವನ್ನು ತಪ್ಪಿಸಬೇಕಾಗಿ ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಇಲಾಖೆ ಅಧಿಕಾರಿಗಳಲ್ಲಿ ಪಂಚಾಯತ್ ನ ಮನವಿಯಾಗಿದೆ.

Related posts

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಮಂಗಳೂರು ಕೆನರಾ ಕೈಗಾರಿಕಾ ಸಂಘಕ್ಕೆ ನಿರ್ದೇಶಕರಾಗಿ ಪಿ.ಹೆಚ್ ಆನಂದ ಗೌಡ ನೆರಿಯ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಬೆನಕ ಆಸ್ಪತ್ರೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!