September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾವೂರು: ನಿoರ್ದಿ ಬಳಿ ರಸ್ತೆಗೆ ಬಿದ್ದ ಮರ ಗ್ರಾ.ಪಂ. ನಿಂದ ತೆರವು ಕಾರ್ಯ

ನಾವೂರು: ನಿನ್ನೆ (ಜು.8)ರಾತ್ರಿ ಸುರಿದ ಭಾರಿ ಮಳೆಗೆ ನಿoರ್ದಿ ರಸ್ತೆ ಬದಿಯ ಮರ ಬೆಳ್ತಂಗಡಿ -ಕಿಲ್ಲೂರು ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ವಿಷಯ ತಿಳಿದ ತಕ್ಷಣ ಗ್ರಾ.ಪಂ. ಮರ ತೆರವು ಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಮಾಜಿ ಅಧ್ಯಕ್ಷರು ಹಾಲಿ ಸದಸ್ಯ ಗಣೇಶ್ ಗೌಡ ನಾವೂರು ಹಾಗೂ ಪಂಚಾಯತ್ ಸದಸ್ಯ ಹಸೈನಾರ್, ಸ್ಥಳೀಯರಾದ ಎ.ಕೆ. ಅಬ್ಬಾಸ್, ಸತೀಶ್ ಸುವರ್ಣ, ಮಾಧವ ಗೌಡ ಒಳಗುಡ್ಡೆ, ಹಮೀದ್ ನಿoರ್ದಿ ರವರು ಮರವನ್ನು ತೇರವುಗೊಳಿಸಲು ಸಹಕರಿಸಿದರು.

ಸಾಲುಗಟ್ಟಿ ನಿಂತ ವಾಹನಗಳನ್ನು ಬದಲಿ ರಸ್ತೆಗಳಾದ ನವಗ್ರಾಮ ಜನತಾ ಕಾಲನಿ ಹಾಗೂ ಪಾಲೇದಬೆಟ್ಟು – ನಾವೂರು ರಸ್ತೆಯಲ್ಲಿ ಕಳಿಸಲಾಯಿತು.ರಸ್ತೆ ಬದಿಯಲ್ಲಿ ಹಲವಾರು ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಗೆ ಈಗಾಗಲೇ ಗ್ರಾ.ಪಂ. ನಿಂದ ಮನವಿ ಮಾಡಿದ್ದು ಮರ ತೆರವುಗೊಳಿಸಲು ಅನುಮತಿ ನೀಡಿರುತ್ತಾರೆ.

ಸಾರ್ವಜನಿಕರಿಗೆ ತೊಂದರೆ ಆಗುವ ಮೊದಲು ಮರ ತೆರವು ಗೊಳಿಸಿ ಮುಂದೆ ನಡೆಯುವ ಅನಾಹುತವನ್ನು ತಪ್ಪಿಸಬೇಕಾಗಿ ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಇಲಾಖೆ ಅಧಿಕಾರಿಗಳಲ್ಲಿ ಪಂಚಾಯತ್ ನ ಮನವಿಯಾಗಿದೆ.

Related posts

ನಾಲ್ಕೂರು: ಅಸೌಖ್ಯದಿಂದ ಯೈಕುರಿ ವಸಂತಿ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಕಲ್ಲೇರಿ ಅಂಗನವಾಡಿ ಕೇಂದ್ರಕ್ಕೆ ಬದಲಿ ವ್ಯವಸ್ಥೆ- ಮತ್ತೆ ಕಾರ್ಯಾರಂಭಗೊಂಡ ಅಂಗನವಾಡಿ ಕೇಂದ್ರ

Suddi Udaya

ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿ ಉದ್ಘಾಟನೆ

Suddi Udaya

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!