25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲಾ ಸಂಸತ್ತು ಉದ್ಘಾಟನೆ

ಮೂಡುಬಿದಿರೆ: ‘ಶಾಲಾ ಸಂಸತ್ತು ನಾಯಕತ್ವದ ಬೆಳವಣಿಗೆಗೆ ಅಡಿಪಾಯವನ್ನು ಒದಗಿಸುವ ವೇದಿಕೆ. ಕೈಯ ಐದು ಬೆರಳುಗಳು ಒಂದೇ ರೀತಿ ಇರುವುದಿಲ್ಲ. ಪ್ರತಿಯೊಬ್ಬನಲ್ಲಿಯೂ ಒಂದೊಂದು ಪ್ರತಿಭೆ ಸುಪ್ತವಾಗಿರುತ್ತದೆ. ಸೋಲು ಜೀವನದ ಅಂತ್ಯವಲ್ಲ ಅದು ಯಶಸ್ಸಿನ ಆರಂಭ’ ಎಂದು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಕೆ ಅಭಿಪ್ರಾಯ ಪಟ್ಟರು.

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯಲ್ಲಿ ಜು.8 ರಂದು ಜರಗಿದ ಶಾಲಾ ಸಂಸತ್ತು ಉದ್ಘಾಟಿಸಿ ಮಾತನಾಡಿದರು.

ನ್ಯಾಯವಾದಿ ಜಿನೇಂದ್ರ ಕುಮಾರ್ ಮಾತನಾಡುತ್ತಾ ‘ಜೀವನದಲ್ಲಿ ಯಾವ ಹುದ್ದೆಯು ಅಧಿಕಾರವಲ್ಲ, ಅದು ಜವಾಬ್ದಾರಿಯಾಗಿದೆ. ಸಂವಿಧಾನವು ಹಕ್ಕುಗಳಿಗೆ ಮಾತ್ರ ಸೀಮಿತವಲ್ಲ, ಅದರಲ್ಲಿ ಕರ್ತವ್ಯಗಳು ಕೂಡ ಇದೆ. ಪ್ರತಿಯೊಬ್ಬರೂ ಅವರ ವಯಸ್ಸಿಗನುಗುಣವಾಗಿ ದೇಶಸೇವೆಯನ್ನು ಮಾಡಬೇಕು. ಸಾರ್ವಜನಿಕ ಸಂಪತ್ತನ್ನು ರಕ್ಷಣೆ ಮಾಡುವ ಜವಾಬ್ದಾರಿ ವಿದ್ಯಾರ್ಥಿ ಜೀವನದಲ್ಲಿ ಮುಖ್ಯವಾದುದು ಎಂದು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಮಿಥುನ್ ರೈ ಹಾಗೂ ಜಿನೇಂದ್ರ ಕುಮಾರ್ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ಹಾಗೂ ನಾಗರಿಕ ಕರ್ತವ್ಯದ ಹೊಣೆಗಾರಿಕಾ ಫಲಕವನ್ನು ವಿವಿಧ ವಿಭಾಗದ ಮುಖ್ಯಸ್ಥರಿಗೆ ಹಸ್ತಾಂತರಿಸಲಾಯಿತು.


ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ ಭಟ್, ಉಪಮುಖ್ಯೋಪಾಧ್ಯಾಯರಾದ ಜಯಶೀಲ ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ವೆನೆಸ್ಸಾ ನೊರೋನ್ಹಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ನಾಯಕ ಹಿತೇಶ್ ನಾಯಕ್ ಸ್ವಾಗತಿಸಿ ರೀನಲ್ ರಿನ್ಸಿಯಾ ಸೆರಾವೋ ವಂದಿಸಿದರು.

Related posts

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

Suddi Udaya

ಕೆಎಮ್ ಜೆ ಗುರುವಾಯನಕೆರೆ ಸರ್ಕಲ್ ವತಿಯಿಂದ ಮದ್ದಡ್ಕದಲ್ಲಿ ಈದ್ ಮಿಲಾದ್ ಸಂಗಮ

Suddi Udaya

ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಪ್ರವೀಣ್ ರೈ, ಉಪಾಧ್ಯಕ್ಷರಾಗಿ ಶಿವರಾಮ ಅವಿರೋಧವಾಗಿ ಆಯ್ಕೆ

Suddi Udaya

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya
error: Content is protected !!