ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲಾ ಸಂಸತ್ತು ಉದ್ಘಾಟನೆ

ಮೂಡುಬಿದಿರೆ: ‘ಶಾಲಾ ಸಂಸತ್ತು ನಾಯಕತ್ವದ ಬೆಳವಣಿಗೆಗೆ ಅಡಿಪಾಯವನ್ನು ಒದಗಿಸುವ ವೇದಿಕೆ. ಕೈಯ ಐದು ಬೆರಳುಗಳು ಒಂದೇ ರೀತಿ ಇರುವುದಿಲ್ಲ. ಪ್ರತಿಯೊಬ್ಬನಲ್ಲಿಯೂ ಒಂದೊಂದು ಪ್ರತಿಭೆ ಸುಪ್ತವಾಗಿರುತ್ತದೆ. ಸೋಲು ಜೀವನದ ಅಂತ್ಯವಲ್ಲ ಅದು ಯಶಸ್ಸಿನ ಆರಂಭ’ ಎಂದು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಕೆ ಅಭಿಪ್ರಾಯ ಪಟ್ಟರು.

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯಲ್ಲಿ ಜು.8 ರಂದು ಜರಗಿದ ಶಾಲಾ ಸಂಸತ್ತು ಉದ್ಘಾಟಿಸಿ ಮಾತನಾಡಿದರು.

ನ್ಯಾಯವಾದಿ ಜಿನೇಂದ್ರ ಕುಮಾರ್ ಮಾತನಾಡುತ್ತಾ ‘ಜೀವನದಲ್ಲಿ ಯಾವ ಹುದ್ದೆಯು ಅಧಿಕಾರವಲ್ಲ, ಅದು ಜವಾಬ್ದಾರಿಯಾಗಿದೆ. ಸಂವಿಧಾನವು ಹಕ್ಕುಗಳಿಗೆ ಮಾತ್ರ ಸೀಮಿತವಲ್ಲ, ಅದರಲ್ಲಿ ಕರ್ತವ್ಯಗಳು ಕೂಡ ಇದೆ. ಪ್ರತಿಯೊಬ್ಬರೂ ಅವರ ವಯಸ್ಸಿಗನುಗುಣವಾಗಿ ದೇಶಸೇವೆಯನ್ನು ಮಾಡಬೇಕು. ಸಾರ್ವಜನಿಕ ಸಂಪತ್ತನ್ನು ರಕ್ಷಣೆ ಮಾಡುವ ಜವಾಬ್ದಾರಿ ವಿದ್ಯಾರ್ಥಿ ಜೀವನದಲ್ಲಿ ಮುಖ್ಯವಾದುದು ಎಂದು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಮಿಥುನ್ ರೈ ಹಾಗೂ ಜಿನೇಂದ್ರ ಕುಮಾರ್ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ಹಾಗೂ ನಾಗರಿಕ ಕರ್ತವ್ಯದ ಹೊಣೆಗಾರಿಕಾ ಫಲಕವನ್ನು ವಿವಿಧ ವಿಭಾಗದ ಮುಖ್ಯಸ್ಥರಿಗೆ ಹಸ್ತಾಂತರಿಸಲಾಯಿತು.


ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ ಭಟ್, ಉಪಮುಖ್ಯೋಪಾಧ್ಯಾಯರಾದ ಜಯಶೀಲ ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ವೆನೆಸ್ಸಾ ನೊರೋನ್ಹಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ನಾಯಕ ಹಿತೇಶ್ ನಾಯಕ್ ಸ್ವಾಗತಿಸಿ ರೀನಲ್ ರಿನ್ಸಿಯಾ ಸೆರಾವೋ ವಂದಿಸಿದರು.

Related posts

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ ಎಸ್‌ಯುವಿ ವಿಭಾಗದ ವಿಕ್ಟೋರಿಸ್ ಕಾರು ಬಿಡುಗಡೆ

Suddi Udaya

ಕಾಯರ್ತಡ್ಕ: ಹದಗೆಟ್ಟ ರಸ್ತೆ, ಶಿಲಾನ್ಯಾಸಗೊಂಡ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ಪ್ರತಿಭಟನೆಗೆ ಗ್ರಾಮಸ್ಥರ ಸಿದ್ದತೆ

Suddi Udaya

ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

Suddi Udaya

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

Suddi Udaya

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವಿ.ಪ. ಶಾಸಕ ಕಿಶೋರ್ ಕುಮಾರ್ ರವರಿಗೆ ಸನ್ಮಾನ

Suddi Udaya
error: Content is protected !!