September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಕಣಿಯೂರು ಗ್ರಾಮ ಪಂಚಾಯತ್ ನ ದೈನಂದಿನ ಆಡಳಿತ ಕಾರ್ಯಗಳಿಗೆ ಅನುಕೂಲವಾಗುವ ಕಂಪ್ಯೂಟರ್ ಕೊಠಡಿ ಯು ಮಳೆಗಾಲದಲ್ಲಿ ನೀರು ಸುರಿದು ತೊಂದರೆಯಾಗುತ್ತಿದ್ದು, ಮತ್ತು ಫೈಲ್ ಗಳು ಮಳೆಗೆ ಒದ್ದೆಯಾಗುವ ಸಾಧ್ಯತೆಯನ್ನು ಅರಿತು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಬಹುಮತ ದ ನಿರ್ಣಯ ದ ಮೇರೆಗೆ ಗ್ರಾಮ ಪಂಚಾಯತ್ ಕಟ್ಟಡದ ನವೀಕರಣ ಕಾರ್ಯ ಆರಂಭವಾಗಿತ್ತು. ಆದರೆ ಆರಂಭವಾದ ಕೆಲ ದಿನಗಳ ಬಳಿಕ ಕಣಿಯೂರು ಗ್ರಾಮದ ಸತೀಶ್ ರಾವ್ ಎಂಬವರು ತಾಲೂಕು ಪಂಚಾಯತ್ ಆಡಳಿತ ಅಧಿಕಾರಿಯವರ ಮುಂದೆ ಅರ್ಜಿ ಸಲ್ಲಿಸಿ ಕಣಿಯೂರು ಗ್ರಾಮ ಪಂಚಾಯತ್ ನವೀಕರಣಕ್ಕೆ ಕೈಗೊಂಡ ನಿರ್ಣಯ ಕಾನೂನು ಬಾಹಿರವಾಗಿದ್ದು ನಿರ್ಣಯ ವಜಾಗೊಳಿಸಿ ಕಾಮಗಾರಿಯನ್ನು ತಡೆಹಿಡಿಯಬೇಕೆಂದು ಕೋರಿದ್ದರು.

ಎರಡೂ ಕಡೆಯವರ ವಾದವನ್ನು ಆಲಿಸಿದ ಆಡಳಿತಾಧಿಕಾರಿಯವರು ಕಣಿಯೂರು ಗ್ರಾಮ ಪಂಚಾಯತ್ ಕೈಗೊಂಡ ನಿರ್ಣಯ ಕಾನೂನು ಪ್ರಕಾರ ಆಗಿದೆ ಎಂದು ಅಭಿಪ್ರಾಯಪಟ್ಟು ಸತೀಶ್ ರಾವ್ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಲಾಗಿದೆ. ಆಡಳಿತಾಧಿಕಾರಿಯವರ ಮೌಖಿಕ ಆದೇಶದನ್ವಯ ತಡೆಹಿಡಿಯಲಾಗಿದ್ದ ನವೀಕರಣ ಕಾಮಗಾರಿ ಸಂಪೂರ್ಣಗೊAಡಿರುತ್ತದೆ.

Related posts

ಮುಂಡಾಜೆ ಕೀರ್ತನಾ ಕಲಾ ತಂಡ ವತಿಯಿಂದ ಆಟಿಡೋಂಜಿ ಐತಾರೊ ಕಾರ್ಯಕ್ರಮ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಓಣಂ ಆಚರಣೆ

Suddi Udaya

ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರ ಸಭೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

Suddi Udaya

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
error: Content is protected !!