22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಕಣಿಯೂರು ಗ್ರಾಮ ಪಂಚಾಯತ್ ನ ದೈನಂದಿನ ಆಡಳಿತ ಕಾರ್ಯಗಳಿಗೆ ಅನುಕೂಲವಾಗುವ ಕಂಪ್ಯೂಟರ್ ಕೊಠಡಿ ಯು ಮಳೆಗಾಲದಲ್ಲಿ ನೀರು ಸುರಿದು ತೊಂದರೆಯಾಗುತ್ತಿದ್ದು, ಮತ್ತು ಫೈಲ್ ಗಳು ಮಳೆಗೆ ಒದ್ದೆಯಾಗುವ ಸಾಧ್ಯತೆಯನ್ನು ಅರಿತು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಬಹುಮತ ದ ನಿರ್ಣಯ ದ ಮೇರೆಗೆ ಗ್ರಾಮ ಪಂಚಾಯತ್ ಕಟ್ಟಡದ ನವೀಕರಣ ಕಾರ್ಯ ಆರಂಭವಾಗಿತ್ತು. ಆದರೆ ಆರಂಭವಾದ ಕೆಲ ದಿನಗಳ ಬಳಿಕ ಕಣಿಯೂರು ಗ್ರಾಮದ ಸತೀಶ್ ರಾವ್ ಎಂಬವರು ತಾಲೂಕು ಪಂಚಾಯತ್ ಆಡಳಿತ ಅಧಿಕಾರಿಯವರ ಮುಂದೆ ಅರ್ಜಿ ಸಲ್ಲಿಸಿ ಕಣಿಯೂರು ಗ್ರಾಮ ಪಂಚಾಯತ್ ನವೀಕರಣಕ್ಕೆ ಕೈಗೊಂಡ ನಿರ್ಣಯ ಕಾನೂನು ಬಾಹಿರವಾಗಿದ್ದು ನಿರ್ಣಯ ವಜಾಗೊಳಿಸಿ ಕಾಮಗಾರಿಯನ್ನು ತಡೆಹಿಡಿಯಬೇಕೆಂದು ಕೋರಿದ್ದರು.

ಎರಡೂ ಕಡೆಯವರ ವಾದವನ್ನು ಆಲಿಸಿದ ಆಡಳಿತಾಧಿಕಾರಿಯವರು ಕಣಿಯೂರು ಗ್ರಾಮ ಪಂಚಾಯತ್ ಕೈಗೊಂಡ ನಿರ್ಣಯ ಕಾನೂನು ಪ್ರಕಾರ ಆಗಿದೆ ಎಂದು ಅಭಿಪ್ರಾಯಪಟ್ಟು ಸತೀಶ್ ರಾವ್ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಲಾಗಿದೆ. ಆಡಳಿತಾಧಿಕಾರಿಯವರ ಮೌಖಿಕ ಆದೇಶದನ್ವಯ ತಡೆಹಿಡಿಯಲಾಗಿದ್ದ ನವೀಕರಣ ಕಾಮಗಾರಿ ಸಂಪೂರ್ಣಗೊAಡಿರುತ್ತದೆ.

Related posts

ನ.14: ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘ ನೇತೃತ್ವದಲ್ಲಿ ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆ

Suddi Udaya

ಬೈಂದೂರು ಉತ್ಸವ: ಸೇವಾಭಾರತಿ ತಂಡ ಭಾಗಿ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ಬಗ್ಗೆ ತರಬೇತಿ

Suddi Udaya

ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳ ರ‍್ಯಾಂಕ್ ಸಾಧನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!