25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಕಣಿಯೂರು ಗ್ರಾಮ ಪಂಚಾಯತ್ ನ ದೈನಂದಿನ ಆಡಳಿತ ಕಾರ್ಯಗಳಿಗೆ ಅನುಕೂಲವಾಗುವ ಕಂಪ್ಯೂಟರ್ ಕೊಠಡಿ ಯು ಮಳೆಗಾಲದಲ್ಲಿ ನೀರು ಸುರಿದು ತೊಂದರೆಯಾಗುತ್ತಿದ್ದು, ಮತ್ತು ಫೈಲ್ ಗಳು ಮಳೆಗೆ ಒದ್ದೆಯಾಗುವ ಸಾಧ್ಯತೆಯನ್ನು ಅರಿತು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಬಹುಮತ ದ ನಿರ್ಣಯ ದ ಮೇರೆಗೆ ಗ್ರಾಮ ಪಂಚಾಯತ್ ಕಟ್ಟಡದ ನವೀಕರಣ ಕಾರ್ಯ ಆರಂಭವಾಗಿತ್ತು. ಆದರೆ ಆರಂಭವಾದ ಕೆಲ ದಿನಗಳ ಬಳಿಕ ಕಣಿಯೂರು ಗ್ರಾಮದ ಸತೀಶ್ ರಾವ್ ಎಂಬವರು ತಾಲೂಕು ಪಂಚಾಯತ್ ಆಡಳಿತ ಅಧಿಕಾರಿಯವರ ಮುಂದೆ ಅರ್ಜಿ ಸಲ್ಲಿಸಿ ಕಣಿಯೂರು ಗ್ರಾಮ ಪಂಚಾಯತ್ ನವೀಕರಣಕ್ಕೆ ಕೈಗೊಂಡ ನಿರ್ಣಯ ಕಾನೂನು ಬಾಹಿರವಾಗಿದ್ದು ನಿರ್ಣಯ ವಜಾಗೊಳಿಸಿ ಕಾಮಗಾರಿಯನ್ನು ತಡೆಹಿಡಿಯಬೇಕೆಂದು ಕೋರಿದ್ದರು.

ಎರಡೂ ಕಡೆಯವರ ವಾದವನ್ನು ಆಲಿಸಿದ ಆಡಳಿತಾಧಿಕಾರಿಯವರು ಕಣಿಯೂರು ಗ್ರಾಮ ಪಂಚಾಯತ್ ಕೈಗೊಂಡ ನಿರ್ಣಯ ಕಾನೂನು ಪ್ರಕಾರ ಆಗಿದೆ ಎಂದು ಅಭಿಪ್ರಾಯಪಟ್ಟು ಸತೀಶ್ ರಾವ್ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಲಾಗಿದೆ. ಆಡಳಿತಾಧಿಕಾರಿಯವರ ಮೌಖಿಕ ಆದೇಶದನ್ವಯ ತಡೆಹಿಡಿಯಲಾಗಿದ್ದ ನವೀಕರಣ ಕಾಮಗಾರಿ ಸಂಪೂರ್ಣಗೊAಡಿರುತ್ತದೆ.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಸಂಸ್ಮರಣಾರ್ಥ ಗೊರೂರು ಕಂಡ ಗಾಂಧಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಇತ್ತೀಚೆಗೆ ಮೃತಪಟ್ಟ ಬೂಡುಮುಗೇರು ತೇಜಸ್ವಿನಿಯವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya

ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya
error: Content is protected !!