25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾವೂರು: ನಿoರ್ದಿ ಬಳಿ ರಸ್ತೆಗೆ ಬಿದ್ದ ಮರ ಗ್ರಾ.ಪಂ. ನಿಂದ ತೆರವು ಕಾರ್ಯ

ನಾವೂರು: ನಿನ್ನೆ (ಜು.8)ರಾತ್ರಿ ಸುರಿದ ಭಾರಿ ಮಳೆಗೆ ನಿoರ್ದಿ ರಸ್ತೆ ಬದಿಯ ಮರ ಬೆಳ್ತಂಗಡಿ -ಕಿಲ್ಲೂರು ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ವಿಷಯ ತಿಳಿದ ತಕ್ಷಣ ಗ್ರಾ.ಪಂ. ಮರ ತೆರವು ಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಮಾಜಿ ಅಧ್ಯಕ್ಷರು ಹಾಲಿ ಸದಸ್ಯ ಗಣೇಶ್ ಗೌಡ ನಾವೂರು ಹಾಗೂ ಪಂಚಾಯತ್ ಸದಸ್ಯ ಹಸೈನಾರ್, ಸ್ಥಳೀಯರಾದ ಎ.ಕೆ. ಅಬ್ಬಾಸ್, ಸತೀಶ್ ಸುವರ್ಣ, ಮಾಧವ ಗೌಡ ಒಳಗುಡ್ಡೆ, ಹಮೀದ್ ನಿoರ್ದಿ ರವರು ಮರವನ್ನು ತೇರವುಗೊಳಿಸಲು ಸಹಕರಿಸಿದರು.

ಸಾಲುಗಟ್ಟಿ ನಿಂತ ವಾಹನಗಳನ್ನು ಬದಲಿ ರಸ್ತೆಗಳಾದ ನವಗ್ರಾಮ ಜನತಾ ಕಾಲನಿ ಹಾಗೂ ಪಾಲೇದಬೆಟ್ಟು – ನಾವೂರು ರಸ್ತೆಯಲ್ಲಿ ಕಳಿಸಲಾಯಿತು.ರಸ್ತೆ ಬದಿಯಲ್ಲಿ ಹಲವಾರು ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಗೆ ಈಗಾಗಲೇ ಗ್ರಾ.ಪಂ. ನಿಂದ ಮನವಿ ಮಾಡಿದ್ದು ಮರ ತೆರವುಗೊಳಿಸಲು ಅನುಮತಿ ನೀಡಿರುತ್ತಾರೆ.

ಸಾರ್ವಜನಿಕರಿಗೆ ತೊಂದರೆ ಆಗುವ ಮೊದಲು ಮರ ತೆರವು ಗೊಳಿಸಿ ಮುಂದೆ ನಡೆಯುವ ಅನಾಹುತವನ್ನು ತಪ್ಪಿಸಬೇಕಾಗಿ ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಇಲಾಖೆ ಅಧಿಕಾರಿಗಳಲ್ಲಿ ಪಂಚಾಯತ್ ನ ಮನವಿಯಾಗಿದೆ.

Related posts

ಎಸ್.ಡಿ.ಎಂ ಪ.ಪೂರ್ವ ಕಾಲೇಜು : ಶೈಕ್ಷಣಿಕ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ – ‘ ಪುರಸ್ಕಾರ್ – 2025: ಸಾಂಸ್ಕೃತಿಕ ಹಾಗೂ ಕ್ರೀಡಾ ಸಾಧಕರಿಗೆ ಪುರಸ್ಕಾರ-ಸಾಧಕ ಶಿಕ್ಷಕರಿಗೆ ಸನ್ಮಾನ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಸುಲ್ಕೇರಿ ಗ್ರಾ.ಪಂ. ವತಿಯಿಂದ ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ

Suddi Udaya

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya
error: Content is protected !!