September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾವೂರು: ನಿoರ್ದಿ ಬಳಿ ರಸ್ತೆಗೆ ಬಿದ್ದ ಮರ ಗ್ರಾ.ಪಂ. ನಿಂದ ತೆರವು ಕಾರ್ಯ

ನಾವೂರು: ನಿನ್ನೆ (ಜು.8)ರಾತ್ರಿ ಸುರಿದ ಭಾರಿ ಮಳೆಗೆ ನಿoರ್ದಿ ರಸ್ತೆ ಬದಿಯ ಮರ ಬೆಳ್ತಂಗಡಿ -ಕಿಲ್ಲೂರು ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ವಿಷಯ ತಿಳಿದ ತಕ್ಷಣ ಗ್ರಾ.ಪಂ. ಮರ ತೆರವು ಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಮಾಜಿ ಅಧ್ಯಕ್ಷರು ಹಾಲಿ ಸದಸ್ಯ ಗಣೇಶ್ ಗೌಡ ನಾವೂರು ಹಾಗೂ ಪಂಚಾಯತ್ ಸದಸ್ಯ ಹಸೈನಾರ್, ಸ್ಥಳೀಯರಾದ ಎ.ಕೆ. ಅಬ್ಬಾಸ್, ಸತೀಶ್ ಸುವರ್ಣ, ಮಾಧವ ಗೌಡ ಒಳಗುಡ್ಡೆ, ಹಮೀದ್ ನಿoರ್ದಿ ರವರು ಮರವನ್ನು ತೇರವುಗೊಳಿಸಲು ಸಹಕರಿಸಿದರು.

ಸಾಲುಗಟ್ಟಿ ನಿಂತ ವಾಹನಗಳನ್ನು ಬದಲಿ ರಸ್ತೆಗಳಾದ ನವಗ್ರಾಮ ಜನತಾ ಕಾಲನಿ ಹಾಗೂ ಪಾಲೇದಬೆಟ್ಟು – ನಾವೂರು ರಸ್ತೆಯಲ್ಲಿ ಕಳಿಸಲಾಯಿತು.ರಸ್ತೆ ಬದಿಯಲ್ಲಿ ಹಲವಾರು ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಗೆ ಈಗಾಗಲೇ ಗ್ರಾ.ಪಂ. ನಿಂದ ಮನವಿ ಮಾಡಿದ್ದು ಮರ ತೆರವುಗೊಳಿಸಲು ಅನುಮತಿ ನೀಡಿರುತ್ತಾರೆ.

ಸಾರ್ವಜನಿಕರಿಗೆ ತೊಂದರೆ ಆಗುವ ಮೊದಲು ಮರ ತೆರವು ಗೊಳಿಸಿ ಮುಂದೆ ನಡೆಯುವ ಅನಾಹುತವನ್ನು ತಪ್ಪಿಸಬೇಕಾಗಿ ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಇಲಾಖೆ ಅಧಿಕಾರಿಗಳಲ್ಲಿ ಪಂಚಾಯತ್ ನ ಮನವಿಯಾಗಿದೆ.

Related posts

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಅಝ್ಹಾ ಪ್ರಾರ್ಥನೆ

Suddi Udaya

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!