23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲಾ ಸಂಸತ್ತು ಉದ್ಘಾಟನೆ

ಮೂಡುಬಿದಿರೆ: ‘ಶಾಲಾ ಸಂಸತ್ತು ನಾಯಕತ್ವದ ಬೆಳವಣಿಗೆಗೆ ಅಡಿಪಾಯವನ್ನು ಒದಗಿಸುವ ವೇದಿಕೆ. ಕೈಯ ಐದು ಬೆರಳುಗಳು ಒಂದೇ ರೀತಿ ಇರುವುದಿಲ್ಲ. ಪ್ರತಿಯೊಬ್ಬನಲ್ಲಿಯೂ ಒಂದೊಂದು ಪ್ರತಿಭೆ ಸುಪ್ತವಾಗಿರುತ್ತದೆ. ಸೋಲು ಜೀವನದ ಅಂತ್ಯವಲ್ಲ ಅದು ಯಶಸ್ಸಿನ ಆರಂಭ’ ಎಂದು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಕೆ ಅಭಿಪ್ರಾಯ ಪಟ್ಟರು.

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯಲ್ಲಿ ಜು.8 ರಂದು ಜರಗಿದ ಶಾಲಾ ಸಂಸತ್ತು ಉದ್ಘಾಟಿಸಿ ಮಾತನಾಡಿದರು.

ನ್ಯಾಯವಾದಿ ಜಿನೇಂದ್ರ ಕುಮಾರ್ ಮಾತನಾಡುತ್ತಾ ‘ಜೀವನದಲ್ಲಿ ಯಾವ ಹುದ್ದೆಯು ಅಧಿಕಾರವಲ್ಲ, ಅದು ಜವಾಬ್ದಾರಿಯಾಗಿದೆ. ಸಂವಿಧಾನವು ಹಕ್ಕುಗಳಿಗೆ ಮಾತ್ರ ಸೀಮಿತವಲ್ಲ, ಅದರಲ್ಲಿ ಕರ್ತವ್ಯಗಳು ಕೂಡ ಇದೆ. ಪ್ರತಿಯೊಬ್ಬರೂ ಅವರ ವಯಸ್ಸಿಗನುಗುಣವಾಗಿ ದೇಶಸೇವೆಯನ್ನು ಮಾಡಬೇಕು. ಸಾರ್ವಜನಿಕ ಸಂಪತ್ತನ್ನು ರಕ್ಷಣೆ ಮಾಡುವ ಜವಾಬ್ದಾರಿ ವಿದ್ಯಾರ್ಥಿ ಜೀವನದಲ್ಲಿ ಮುಖ್ಯವಾದುದು ಎಂದು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಮಿಥುನ್ ರೈ ಹಾಗೂ ಜಿನೇಂದ್ರ ಕುಮಾರ್ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ಹಾಗೂ ನಾಗರಿಕ ಕರ್ತವ್ಯದ ಹೊಣೆಗಾರಿಕಾ ಫಲಕವನ್ನು ವಿವಿಧ ವಿಭಾಗದ ಮುಖ್ಯಸ್ಥರಿಗೆ ಹಸ್ತಾಂತರಿಸಲಾಯಿತು.


ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ ಭಟ್, ಉಪಮುಖ್ಯೋಪಾಧ್ಯಾಯರಾದ ಜಯಶೀಲ ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ವೆನೆಸ್ಸಾ ನೊರೋನ್ಹಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ನಾಯಕ ಹಿತೇಶ್ ನಾಯಕ್ ಸ್ವಾಗತಿಸಿ ರೀನಲ್ ರಿನ್ಸಿಯಾ ಸೆರಾವೋ ವಂದಿಸಿದರು.

Related posts

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಕಥೆಗಳಲ್ಲಿ ಜೀವನ ಮೌಲ್ಯ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಬೆಳ್ತಂಗಡಿ : ಎಸ್.ಐ.ಟಿ ತನಿಖೆ ಮುಂದುವರಿಯಲಿ ಅರ್ಜಿದಾರರಿಗೆ ಕಿರುಕುಳ ಬೇಡ ಹೈಕೋರ್ಟ್

Suddi Udaya

ಅರಣ್ಯ ಸಚಿವರ ಆದೇಶ ಇದೆ ಎಂದು ಹೇಳಿಕೊಂಡು ಬಂದ ಅರಣ್ಯ ಇಲಾಖಾಧಿಕಾರಿಗಳು: ಕಳೆಂಜ ಲೋಲಾಕ್ಷ ಮನೆ ತೆರವುಗೊಳಿಸಲು ಮತ್ತೆ ಮುಂದಾದ ಅರಣ್ಯ ಇಲಾಖೆ: ಸ್ಥಳಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿಯ ಶಾಸಕರುಗಳಿಂದ ತೀವ್ರ ವಿರೋಧ: ಎಂ.ಎಲ್. ಸಿ ಯವರನ್ನು ದೂಡಿದ ಅಧಿಕಾರಿ – ಸಳೀಯ ನಾಗರಿಕರ ಪ್ರತಿಭಟನೆ – ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ: ಸಚಿವರಿಂದ ಬಡವರ ಮನೆ ತೆರವಿಗೆ ಹುನ್ನಾರ: ಹರೀಶ್ ಪೂಂಜ ಆರೋಪ

Suddi Udaya

ಶುದ್ಧ ನೀರು ಬಳಕೆಯಿಂದ ಆರೋಗ್ಯ ರಕ್ಷಣೆ: ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

Suddi Udaya
error: Content is protected !!