September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಕಣಿಯೂರು ಗ್ರಾಮ ಪಂಚಾಯತ್ ನ ದೈನಂದಿನ ಆಡಳಿತ ಕಾರ್ಯಗಳಿಗೆ ಅನುಕೂಲವಾಗುವ ಕಂಪ್ಯೂಟರ್ ಕೊಠಡಿ ಯು ಮಳೆಗಾಲದಲ್ಲಿ ನೀರು ಸುರಿದು ತೊಂದರೆಯಾಗುತ್ತಿದ್ದು, ಮತ್ತು ಫೈಲ್ ಗಳು ಮಳೆಗೆ ಒದ್ದೆಯಾಗುವ ಸಾಧ್ಯತೆಯನ್ನು ಅರಿತು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಬಹುಮತ ದ ನಿರ್ಣಯ ದ ಮೇರೆಗೆ ಗ್ರಾಮ ಪಂಚಾಯತ್ ಕಟ್ಟಡದ ನವೀಕರಣ ಕಾರ್ಯ ಆರಂಭವಾಗಿತ್ತು. ಆದರೆ ಆರಂಭವಾದ ಕೆಲ ದಿನಗಳ ಬಳಿಕ ಕಣಿಯೂರು ಗ್ರಾಮದ ಸತೀಶ್ ರಾವ್ ಎಂಬವರು ತಾಲೂಕು ಪಂಚಾಯತ್ ಆಡಳಿತ ಅಧಿಕಾರಿಯವರ ಮುಂದೆ ಅರ್ಜಿ ಸಲ್ಲಿಸಿ ಕಣಿಯೂರು ಗ್ರಾಮ ಪಂಚಾಯತ್ ನವೀಕರಣಕ್ಕೆ ಕೈಗೊಂಡ ನಿರ್ಣಯ ಕಾನೂನು ಬಾಹಿರವಾಗಿದ್ದು ನಿರ್ಣಯ ವಜಾಗೊಳಿಸಿ ಕಾಮಗಾರಿಯನ್ನು ತಡೆಹಿಡಿಯಬೇಕೆಂದು ಕೋರಿದ್ದರು.

ಎರಡೂ ಕಡೆಯವರ ವಾದವನ್ನು ಆಲಿಸಿದ ಆಡಳಿತಾಧಿಕಾರಿಯವರು ಕಣಿಯೂರು ಗ್ರಾಮ ಪಂಚಾಯತ್ ಕೈಗೊಂಡ ನಿರ್ಣಯ ಕಾನೂನು ಪ್ರಕಾರ ಆಗಿದೆ ಎಂದು ಅಭಿಪ್ರಾಯಪಟ್ಟು ಸತೀಶ್ ರಾವ್ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಲಾಗಿದೆ. ಆಡಳಿತಾಧಿಕಾರಿಯವರ ಮೌಖಿಕ ಆದೇಶದನ್ವಯ ತಡೆಹಿಡಿಯಲಾಗಿದ್ದ ನವೀಕರಣ ಕಾಮಗಾರಿ ಸಂಪೂರ್ಣಗೊAಡಿರುತ್ತದೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಷ್ಟ್ರಮಟ್ಟದ ಅತ್ಯುತ್ತಮ ಸಾಹಸ ಪ್ರವಾಸಿ ತಾಣ ಪ್ರಶಸ್ತಿ ಗೆದ್ದ ಕುತ್ಲೂರು ಗ್ರಾಮದ ಪ್ರತಿನಿಧಿಗಳಿಗೆ ಗೌರವಾರ್ಪಣೆ

Suddi Udaya

ವಾಣಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಸಮಾವೇಶ

Suddi Udaya

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ 25 ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನಲ್ಲಿ ನಶಾ ಮುಕ್ತ ಅಭಿಯಾನ ಹಾಗೂ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!