23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಕಣಿಯೂರು ಗ್ರಾಮ ಪಂಚಾಯತ್ ನ ದೈನಂದಿನ ಆಡಳಿತ ಕಾರ್ಯಗಳಿಗೆ ಅನುಕೂಲವಾಗುವ ಕಂಪ್ಯೂಟರ್ ಕೊಠಡಿ ಯು ಮಳೆಗಾಲದಲ್ಲಿ ನೀರು ಸುರಿದು ತೊಂದರೆಯಾಗುತ್ತಿದ್ದು, ಮತ್ತು ಫೈಲ್ ಗಳು ಮಳೆಗೆ ಒದ್ದೆಯಾಗುವ ಸಾಧ್ಯತೆಯನ್ನು ಅರಿತು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಬಹುಮತ ದ ನಿರ್ಣಯ ದ ಮೇರೆಗೆ ಗ್ರಾಮ ಪಂಚಾಯತ್ ಕಟ್ಟಡದ ನವೀಕರಣ ಕಾರ್ಯ ಆರಂಭವಾಗಿತ್ತು. ಆದರೆ ಆರಂಭವಾದ ಕೆಲ ದಿನಗಳ ಬಳಿಕ ಕಣಿಯೂರು ಗ್ರಾಮದ ಸತೀಶ್ ರಾವ್ ಎಂಬವರು ತಾಲೂಕು ಪಂಚಾಯತ್ ಆಡಳಿತ ಅಧಿಕಾರಿಯವರ ಮುಂದೆ ಅರ್ಜಿ ಸಲ್ಲಿಸಿ ಕಣಿಯೂರು ಗ್ರಾಮ ಪಂಚಾಯತ್ ನವೀಕರಣಕ್ಕೆ ಕೈಗೊಂಡ ನಿರ್ಣಯ ಕಾನೂನು ಬಾಹಿರವಾಗಿದ್ದು ನಿರ್ಣಯ ವಜಾಗೊಳಿಸಿ ಕಾಮಗಾರಿಯನ್ನು ತಡೆಹಿಡಿಯಬೇಕೆಂದು ಕೋರಿದ್ದರು.

ಎರಡೂ ಕಡೆಯವರ ವಾದವನ್ನು ಆಲಿಸಿದ ಆಡಳಿತಾಧಿಕಾರಿಯವರು ಕಣಿಯೂರು ಗ್ರಾಮ ಪಂಚಾಯತ್ ಕೈಗೊಂಡ ನಿರ್ಣಯ ಕಾನೂನು ಪ್ರಕಾರ ಆಗಿದೆ ಎಂದು ಅಭಿಪ್ರಾಯಪಟ್ಟು ಸತೀಶ್ ರಾವ್ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಲಾಗಿದೆ. ಆಡಳಿತಾಧಿಕಾರಿಯವರ ಮೌಖಿಕ ಆದೇಶದನ್ವಯ ತಡೆಹಿಡಿಯಲಾಗಿದ್ದ ನವೀಕರಣ ಕಾಮಗಾರಿ ಸಂಪೂರ್ಣಗೊAಡಿರುತ್ತದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ “ಚಿನ್ನದಂತ ನನ್ನ ಅಪ್ಪ” ವಿಶೇಷ ಅನುಬಂಧದ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

Suddi Udaya
error: Content is protected !!