37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

ಕೊಯ್ಯೂರು: “ಶಿಕ್ಷಣ ಹಾಗೂ ಜೀವನ ಮೌಲ್ಯಗಳು ಮಾನವನನ್ನು ಉತ್ತುಂಗದೆಡೆಗೆ ಕೊಂಡೊಯ್ಯುತ್ತವೆ. ವಿದ್ಯಾರ್ಥಿಗಳು ಆಸಕ್ತಿಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಜೀವನದಲ್ಲಿ ಯಶಸ್ಸನ್ನು ಪಡೆಯಲು ಸಾಧ್ಯವಾಗುತ್ತದೆ” ಎಂದು ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಅಶೋಕ್ ಕುಮಾರ್ ಅಗ್ರಸಾಲೆ ಅಭಿಪ್ರಾಯಪಟ್ಟರು.
ಅವರು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಗೈದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕರ್ನಾಟಕ ಹೈಕೋರ್ಟ್ನ ವಕೀಲರಾದ ಜಿತಿನ್ ಜೀಜೋ “ನಾವು ಮಾಡುವ ಕೆಲಸ ಸಮಾಜಮುಖಿಯಾಗಿದ್ದರೆ ಇಡೀ ಸಮಾಜ ನಮ್ಮೊಡನೆ ಕೈ ಜೋಡಿಸುತ್ತದೆ. ಆಗ ಶ್ರೇಷ್ಠ ಸಮಾಜದ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ” ಎಂದು ವಿದ್ಯಾರ್ಥಿ ಶಕ್ತಿಯ ಬಗ್ಗೆ ಮಾಹಿತಿ ನೀಡಿದರು.

ಕೊಯ್ಯೂರು ಗ್ರಾ.ಪಂ. ಸದಸ್ಯ ಲೋಕೇಶ್ ಪಾಂಬೇಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕೊಯ್ಯೂರು ಗ್ರಾ.ಪಂ. ಸದಸ್ಯರುಗಳಾದ ಯಶವಂತ್ ಪೂರ್ಯಾಳ, ಶ್ರೀಮತಿ ಹೇಮಾವತಿ ಕಡಮ್ಮಜೆ, ಪ್ರೌಢ ಶಾಲಾ ಸಹಶಿಕ್ಷಕ ಶ್ರೀರಾಮಚಂದ್ರ ದೊಡ್ಡಮನಿ, ಪ್ರಾಚ್ಯ ವಸ್ತು ಸಂಗ್ರಹಕಾರ ಶ್ರೀ ಹಳ್ಳಿಮನೆ ಹೈದರಾಲಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ರಂಜಿತ್, ಕಾರ್ಯದರ್ಶಿ ವಂಶಿಕ ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಾಂಶುಪಾಲರಾದ ಮೋಹನ ಗೌಡ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ವಾಣಿಜ್ಯ ಶಾಸ್ತç ಉಪನ್ಯಾಸಕಿ ಶ್ರೀಮತಿ ಭವ್ಯ ವಿಶ್ವ ತಂಬಾಕು ದಿನಾಚರಣೆ ಪ್ರಯುಕ್ತ ನಡೆಸಿದ ಸ್ಪರ್ಧೆಗಳ ಬಹುಮಾನ ಪಟ್ಟಿಯ ವಾಚನಗೈದರು. ವಿದ್ಯಾರ್ಥಿಗಳಾದ ವಿನಯ, ಚಿರಸ್ವಿ, ವಿದ್ಯಾ, ಐಶ್ವರ್ಯ ಪ್ರಾರ್ಥನೆ ಗೈದರು. ಅರ್ಥಶಾಸ್ತç ಉಪನ್ಯಾಸಕಿ ಶ್ರೀಮತಿ ತೃಪ್ತಿ ವಂದಿಸಿದರು. ಇತಿಹಾಸ ಉಪನ್ಯಾಸಕ ಲಕ್ಷö್ಮಣ ಗೌಡ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕರಾದ ಮಾಯಿಲ, ಶ್ರೀಮತಿ ಪವಿತ್ರ, ಶ್ರೀಮತಿ ರಶ್ಮಿ ದೇವಿ ಸಹಕರಿಸಿದರು.

Related posts

ಲಾಯಿಲದಲ್ಲಿ ಕೃಷಿ/ತೋಟಗಾರಿಕೆ ಯಂತ್ರೋಪಕರಣಗಳ ಮಾರಾಟ ಹಾಗೂ ಸರ್ವೀಸ್ ಸೆಂಟರ್ ಮಳಿಗೆ ಉದ್ಘಾಟನೆ

Suddi Udaya

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಜ.9: ವಿದ್ಯುತ್ ನಿಲುಗಡೆ

Suddi Udaya

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Suddi Udaya
error: Content is protected !!