32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾವೂರು: ನಿoರ್ದಿ ಬಳಿ ರಸ್ತೆಗೆ ಬಿದ್ದ ಮರ ಗ್ರಾ.ಪಂ. ನಿಂದ ತೆರವು ಕಾರ್ಯ

ನಾವೂರು: ನಿನ್ನೆ (ಜು.8)ರಾತ್ರಿ ಸುರಿದ ಭಾರಿ ಮಳೆಗೆ ನಿoರ್ದಿ ರಸ್ತೆ ಬದಿಯ ಮರ ಬೆಳ್ತಂಗಡಿ -ಕಿಲ್ಲೂರು ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ವಿಷಯ ತಿಳಿದ ತಕ್ಷಣ ಗ್ರಾ.ಪಂ. ಮರ ತೆರವು ಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಮಾಜಿ ಅಧ್ಯಕ್ಷರು ಹಾಲಿ ಸದಸ್ಯ ಗಣೇಶ್ ಗೌಡ ನಾವೂರು ಹಾಗೂ ಪಂಚಾಯತ್ ಸದಸ್ಯ ಹಸೈನಾರ್, ಸ್ಥಳೀಯರಾದ ಎ.ಕೆ. ಅಬ್ಬಾಸ್, ಸತೀಶ್ ಸುವರ್ಣ, ಮಾಧವ ಗೌಡ ಒಳಗುಡ್ಡೆ, ಹಮೀದ್ ನಿoರ್ದಿ ರವರು ಮರವನ್ನು ತೇರವುಗೊಳಿಸಲು ಸಹಕರಿಸಿದರು.

ಸಾಲುಗಟ್ಟಿ ನಿಂತ ವಾಹನಗಳನ್ನು ಬದಲಿ ರಸ್ತೆಗಳಾದ ನವಗ್ರಾಮ ಜನತಾ ಕಾಲನಿ ಹಾಗೂ ಪಾಲೇದಬೆಟ್ಟು – ನಾವೂರು ರಸ್ತೆಯಲ್ಲಿ ಕಳಿಸಲಾಯಿತು.ರಸ್ತೆ ಬದಿಯಲ್ಲಿ ಹಲವಾರು ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಗೆ ಈಗಾಗಲೇ ಗ್ರಾ.ಪಂ. ನಿಂದ ಮನವಿ ಮಾಡಿದ್ದು ಮರ ತೆರವುಗೊಳಿಸಲು ಅನುಮತಿ ನೀಡಿರುತ್ತಾರೆ.

ಸಾರ್ವಜನಿಕರಿಗೆ ತೊಂದರೆ ಆಗುವ ಮೊದಲು ಮರ ತೆರವು ಗೊಳಿಸಿ ಮುಂದೆ ನಡೆಯುವ ಅನಾಹುತವನ್ನು ತಪ್ಪಿಸಬೇಕಾಗಿ ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಇಲಾಖೆ ಅಧಿಕಾರಿಗಳಲ್ಲಿ ಪಂಚಾಯತ್ ನ ಮನವಿಯಾಗಿದೆ.

Related posts

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya

ಆ.21-22: ರೈತರಿಗೆ ಜೇನು ಕೃಷಿ ಹಾಗೂ ಜೇನಿನ ಮೌಲ್ಯವರ್ಧನೆ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಜೆಇಇ ಪರೀಕ್ಷೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya
error: Content is protected !!