ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲಾ ಸಂಸತ್ತು ಉದ್ಘಾಟನೆ

ಮೂಡುಬಿದಿರೆ: ‘ಶಾಲಾ ಸಂಸತ್ತು ನಾಯಕತ್ವದ ಬೆಳವಣಿಗೆಗೆ ಅಡಿಪಾಯವನ್ನು ಒದಗಿಸುವ ವೇದಿಕೆ. ಕೈಯ ಐದು ಬೆರಳುಗಳು ಒಂದೇ ರೀತಿ ಇರುವುದಿಲ್ಲ. ಪ್ರತಿಯೊಬ್ಬನಲ್ಲಿಯೂ ಒಂದೊಂದು ಪ್ರತಿಭೆ ಸುಪ್ತವಾಗಿರುತ್ತದೆ. ಸೋಲು ಜೀವನದ ಅಂತ್ಯವಲ್ಲ ಅದು ಯಶಸ್ಸಿನ ಆರಂಭ’ ಎಂದು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಕೆ ಅಭಿಪ್ರಾಯ ಪಟ್ಟರು.

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯಲ್ಲಿ ಜು.8 ರಂದು ಜರಗಿದ ಶಾಲಾ ಸಂಸತ್ತು ಉದ್ಘಾಟಿಸಿ ಮಾತನಾಡಿದರು.

ನ್ಯಾಯವಾದಿ ಜಿನೇಂದ್ರ ಕುಮಾರ್ ಮಾತನಾಡುತ್ತಾ ‘ಜೀವನದಲ್ಲಿ ಯಾವ ಹುದ್ದೆಯು ಅಧಿಕಾರವಲ್ಲ, ಅದು ಜವಾಬ್ದಾರಿಯಾಗಿದೆ. ಸಂವಿಧಾನವು ಹಕ್ಕುಗಳಿಗೆ ಮಾತ್ರ ಸೀಮಿತವಲ್ಲ, ಅದರಲ್ಲಿ ಕರ್ತವ್ಯಗಳು ಕೂಡ ಇದೆ. ಪ್ರತಿಯೊಬ್ಬರೂ ಅವರ ವಯಸ್ಸಿಗನುಗುಣವಾಗಿ ದೇಶಸೇವೆಯನ್ನು ಮಾಡಬೇಕು. ಸಾರ್ವಜನಿಕ ಸಂಪತ್ತನ್ನು ರಕ್ಷಣೆ ಮಾಡುವ ಜವಾಬ್ದಾರಿ ವಿದ್ಯಾರ್ಥಿ ಜೀವನದಲ್ಲಿ ಮುಖ್ಯವಾದುದು ಎಂದು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಮಿಥುನ್ ರೈ ಹಾಗೂ ಜಿನೇಂದ್ರ ಕುಮಾರ್ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ಹಾಗೂ ನಾಗರಿಕ ಕರ್ತವ್ಯದ ಹೊಣೆಗಾರಿಕಾ ಫಲಕವನ್ನು ವಿವಿಧ ವಿಭಾಗದ ಮುಖ್ಯಸ್ಥರಿಗೆ ಹಸ್ತಾಂತರಿಸಲಾಯಿತು.


ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ ಭಟ್, ಉಪಮುಖ್ಯೋಪಾಧ್ಯಾಯರಾದ ಜಯಶೀಲ ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ವೆನೆಸ್ಸಾ ನೊರೋನ್ಹಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ನಾಯಕ ಹಿತೇಶ್ ನಾಯಕ್ ಸ್ವಾಗತಿಸಿ ರೀನಲ್ ರಿನ್ಸಿಯಾ ಸೆರಾವೋ ವಂದಿಸಿದರು.

Related posts

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

Suddi Udaya

ಆಳ್ವಾಸ್ ಕಾಲೇಜಿನಲ್ಲಿ ಶಿಕ್ಷಕ -ರಕ್ಷಕ ಸಂಘದ ವಾರ್ಷಿಕ ಸಭೆ

Suddi Udaya

ವಾಣಿ ಕಾಲೇಜಿನ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ತೋಟತ್ತಾಡಿ: ಪಾದೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪಿಸುವಂತೆ ಹೈನುಗಾರರಿಂದ ಸಭೆ

Suddi Udaya

ಇಂದು(ಸೆ.2): ಶ್ರೀ ಕ್ಷೇತ್ರ ಓಡೀಲು ನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಕಾರ್ಯಕ್ರಮ

Suddi Udaya
error: Content is protected !!