July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲಾ ಸಂಸತ್ತು ಉದ್ಘಾಟನೆ

ಮೂಡುಬಿದಿರೆ: ‘ಶಾಲಾ ಸಂಸತ್ತು ನಾಯಕತ್ವದ ಬೆಳವಣಿಗೆಗೆ ಅಡಿಪಾಯವನ್ನು ಒದಗಿಸುವ ವೇದಿಕೆ. ಕೈಯ ಐದು ಬೆರಳುಗಳು ಒಂದೇ ರೀತಿ ಇರುವುದಿಲ್ಲ. ಪ್ರತಿಯೊಬ್ಬನಲ್ಲಿಯೂ ಒಂದೊಂದು ಪ್ರತಿಭೆ ಸುಪ್ತವಾಗಿರುತ್ತದೆ. ಸೋಲು ಜೀವನದ ಅಂತ್ಯವಲ್ಲ ಅದು ಯಶಸ್ಸಿನ ಆರಂಭ’ ಎಂದು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಕೆ ಅಭಿಪ್ರಾಯ ಪಟ್ಟರು.

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯಲ್ಲಿ ಜು.8 ರಂದು ಜರಗಿದ ಶಾಲಾ ಸಂಸತ್ತು ಉದ್ಘಾಟಿಸಿ ಮಾತನಾಡಿದರು.

ನ್ಯಾಯವಾದಿ ಜಿನೇಂದ್ರ ಕುಮಾರ್ ಮಾತನಾಡುತ್ತಾ ‘ಜೀವನದಲ್ಲಿ ಯಾವ ಹುದ್ದೆಯು ಅಧಿಕಾರವಲ್ಲ, ಅದು ಜವಾಬ್ದಾರಿಯಾಗಿದೆ. ಸಂವಿಧಾನವು ಹಕ್ಕುಗಳಿಗೆ ಮಾತ್ರ ಸೀಮಿತವಲ್ಲ, ಅದರಲ್ಲಿ ಕರ್ತವ್ಯಗಳು ಕೂಡ ಇದೆ. ಪ್ರತಿಯೊಬ್ಬರೂ ಅವರ ವಯಸ್ಸಿಗನುಗುಣವಾಗಿ ದೇಶಸೇವೆಯನ್ನು ಮಾಡಬೇಕು. ಸಾರ್ವಜನಿಕ ಸಂಪತ್ತನ್ನು ರಕ್ಷಣೆ ಮಾಡುವ ಜವಾಬ್ದಾರಿ ವಿದ್ಯಾರ್ಥಿ ಜೀವನದಲ್ಲಿ ಮುಖ್ಯವಾದುದು ಎಂದು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಮಿಥುನ್ ರೈ ಹಾಗೂ ಜಿನೇಂದ್ರ ಕುಮಾರ್ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ಹಾಗೂ ನಾಗರಿಕ ಕರ್ತವ್ಯದ ಹೊಣೆಗಾರಿಕಾ ಫಲಕವನ್ನು ವಿವಿಧ ವಿಭಾಗದ ಮುಖ್ಯಸ್ಥರಿಗೆ ಹಸ್ತಾಂತರಿಸಲಾಯಿತು.


ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ ಭಟ್, ಉಪಮುಖ್ಯೋಪಾಧ್ಯಾಯರಾದ ಜಯಶೀಲ ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ವೆನೆಸ್ಸಾ ನೊರೋನ್ಹಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ನಾಯಕ ಹಿತೇಶ್ ನಾಯಕ್ ಸ್ವಾಗತಿಸಿ ರೀನಲ್ ರಿನ್ಸಿಯಾ ಸೆರಾವೋ ವಂದಿಸಿದರು.

Related posts

ಅಳದಂಗಡಿಯಲ್ಲಿ ಮಕ್ಕಳ ಸಮ್ಮೇಳನ: ವಿಜಯ್ ಕುಮಾರ್ ಜೈನ್ ನೇತೃತ್ವದಲ್ಲಿ, ಯಕ್ಷಗಾನ ಸಂಭ್ರಮ,ಕುಣಿತ ಭಜನೆ, ಜನಪದ ಉತ್ಸವ

Suddi Udaya

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

Suddi Udaya
error: Content is protected !!